Still no clarity from minister: ಕಾಂಗ್ರೆಸ್ ಸೇರುವ ಬಗ್ಗೆ ಯಾವತ್ತೂ ಮಾತಾಡಿಲ್ಲ, ವದಂತಿ ಸೃಷ್ಟಿಸಿದವರನ್ನೇ ಕೇಳಿ: ವಿ ಸೋಮಣ್ಣ

ಅರುಣ್​ ಕುಮಾರ್​ ಬೆಳ್ಳಿ

Updated on: Mar 10, 2023 | 1:38 PM

ಕಾಂಗ್ರೆಸ್ ಸೇರುವಿರಾ ಎಂದು ಕೇಳಿದ ಪ್ರಶ್ನೆಗೆ ಸೋಮಣ್ಣ ಅವರು, ನಾನ್ಯಾವತ್ತೂ ಅದರ ಬಗ್ಗೆ ಮಾತಾಡಿಲ್ಲ, ವದಂತಿಯನ್ನು ಯಾರು ಸೃಷ್ಟಿಸಿದ್ದಾರೋ ಅವರನ್ನೇ ಕೇಳಿ ಎಂದರು.

ಬೆಂಗಳೂರು: ವಸತಿ ಖಾತೆ ಸಚಿವ ವಿ ಸೋಮಣ್ಣ (V Somanna) ಇವತ್ತು ಕೂಡ ಕಾಂಗ್ರೆಸ್ ಸೇರುತ್ತಾರೆಂಬ ವದಂತಿಯ ಬಗ್ಗೆ ಸ್ಪಷ್ಟವಾಗಿ ಹೇಳಲಿಲ್ಲ. ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಮೊದಲಿಗೆ ತಮ್ಮ ಇಲಾಖೆಯ ಯೋಜನೆಗಳ (projects) ಬಗ್ಗೆ ಮಾತಾಡಿದರು. ಕಾಂಗ್ರೆಸ್ ಸೇರುವಿರಾ ಎಂದು ಕೇಳಿದ ಪ್ರಶ್ನೆಗೆ ಅವರು, ನಾನ್ಯಾವತ್ತೂ ಅದರ ಬಗ್ಗೆ ಮಾತಾಡಿಲ್ಲ, ವದಂತಿಯನ್ನು ಯಾರು ಸೃಷ್ಟಿಸಿದ್ದಾರೋ ಅವರನ್ನೇ ಕೇಳಿ ಎಂದರು. ಮುಂದುವರಿದು ಮಾತಾಡಿದ ಅವರು ತಮ್ಮ ಸಮಸ್ಯೆಗಳ ಬಗ್ಗೆ ಪಕ್ಷದ ರಾಜ್ಯಾಧ್ಯಕ್ಷರೊಂದಿಗೆ ಚರ್ಚಿಸಿರುವುದಾಗಿ ಹೇಳಿದರು. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಅವರ ರ‍್ಯಾಲಿಯಲ್ಲಿ (Rally) ಯಾಕೆ ಭಾಗವಹಿಸಿಲ್ಲ ಎಂದು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 10, 2023 01:38 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.