ಕೋಲಾರದಲ್ಲಿ ನವ ವಧು-ವರರ ಹೊಡೆದಾಟ-ಎಸ್ಪಿ ಶಾಕಿಂಗ್​ ರಿಯಾಕ್ಷನ್

ಕೆಜಿಎಫ್(KGF) ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ನಿನ್ನೆ(ಆಗಸ್ಟ್​ 07) ವಧು ಲಿಖಿತ ಶ್ರೀ ಹಾಗೂ ನವೀನ್ ಅದ್ಧೂರಿಯಾಗಿ ಮದುವೆ ಆಗಿ ಇಬ್ಬರು ಹೊಡೆದಾಡಿಕೊಂಡು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಕೋಲಾರ ಎಸ್ಪಿ ಶಾಕಿಂಗ್​ ರಿಯಾಕ್ಷನ್​ ಕೊಟ್ಟಿದ್ದು, ‘ ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ರೂಮ್​ಗೆ ಹೋದಾಗ, ಇಬ್ಬರ ನಡುವೆ ಮನಸ್ಥಾಪ ಬಂದು, ವರ ನವೀನ್ ಹರಿತವಾದ ಆಯುಧದಿಂದ ಹೊಡೆದಿರುವುದು ತಿಳಿದು ಬಂದಿದೆ ಎಂದಿದ್ದಾರೆ.

ಕೋಲಾರದಲ್ಲಿ ನವ ವಧು-ವರರ ಹೊಡೆದಾಟ-ಎಸ್ಪಿ ಶಾಕಿಂಗ್​ ರಿಯಾಕ್ಷನ್
|

Updated on:Aug 08, 2024 | 3:13 PM

ಕೋಲಾರ, ಆ.08: ಜಿಲ್ಲೆಯ ಕೆಜಿಎಫ್(KGF) ತಾಲ್ಲೂಕು ಚಂಬರಸನಹಳ್ಳಿ ಗ್ರಾಮದಲ್ಲಿ ನಿನ್ನೆ(ಆಗಸ್ಟ್​ 07) ವಧು ಲಿಖಿತ ಶ್ರೀ ಹಾಗೂ ನವೀನ್ ಅದ್ಧೂರಿಯಾಗಿ ಮದುವೆ ಆಗಿ, ಬಳಿಕ ಹೊಡೆದಾಡಿಕೊಂಡು ಮೃತರಾಗಿದ್ದರು. ಈ ಕುರಿತು ಮಾತನಾಡಿದ ಕೋಲಾರ ಎಸ್ಪಿ, ‘ಎರಡು ಕಡೆಯವರ ಸಂಬಂಧಿಕರು ಸೇರಿ ವಿವಾಹ ಮಾಡಿದ್ದಾರೆ. ಬಳಿಕ ಸಾಯಂಕಾಲ 5 ಗಂಟೆ ಸುಮಾರಿಗೆ ನೂತನ ಜೋಡಿ, ವರನ ಮನೆಗೆ ಹೋಗಿದ್ದಾರೆ. ನಂತರ ಇಬ್ಬರು ಒಂದು ರೂಂನ ಒಳಗೆ ಹೋಗಿದ್ದು, ಕೆಲಸಮಯದ ಬಳಿಕ ಗಲಾಟೆ ಶಬ್ದ ಕೇಳುತ್ತದೆ. ಕೂಡಲೇ ಎಲ್ಲರೂ ಹೋಗಿ ನೋಡಿದಾಗ ಇಬ್ಬರು ರಕ್ತದ ಮಡುವಿನಲ್ಲಿ ಬಿದ್ದಿರುತ್ತಾರೆ. ಇಬ್ಬರನ್ನು ಆಟೋದಲ್ಲಿ ಕರೆದುಕೊಂಡು ಬಂದು ಕೆಜಿಎಫ್​ನ ಆಸ್ಪತ್ರೆಯಲ್ಲಿ ಸೇರಿಸುತ್ತಾರೆ. ಆದರೆ, ವಧು ಲಿಖಿತ ಶ್ರೀ ಸಾವನ್ನಪ್ಪಿದ್ದಾರೆ. ಇಂದು (ಆ.08) ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದುಕೊಂಡು ಹೋಗುತ್ತಿದ್ದಾಗ ದುರಾದೃಷ್ಟವಶಾತ್​ ವರ ನವೀನ್ ಕೂಡ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ:ಕೋಲಾರ ನವದಂಪತಿ ಹೊಡೆದಾಟ ಪ್ರಕರಣ: ಬೇರೆ ಯಾರೋ ಹೊಡೆದಿದ್ದಾರೆಂದು ಆರೋಪಿಸಿದ ಕುಟುಂಬ

ಈ ಕುರಿತು ವಧುವಿನ ತಂದೆ ದೂರು ದಾಖಲಿಸಿದ್ದು, ಪ್ರಾಥಮಿಕ ತನಿಖೆಯಲ್ಲಿ ಇಬ್ಬರು ರೂಮ್​ಗೆ ಹೋದಾಗ, ಇಬ್ಬರ ನಡುವೆ ಮನಸ್ಥಾಪ ಬಂದು, ವರ ನವೀನ್ ಹರಿತವಾದ ಆಯುಧದಿಂದ ಹೊಡೆದಿರುವುದು ತಿಳಿದು ಬಂದಿದೆ. ಇನ್ನು ಎಲ್ಲರೂ ಬರುವಷ್ಟರಲ್ಲಿ ತನ್ನ ಮೇಲೇ ತಾನೇ ಹಲ್ಲೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದರು.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:52 pm, Thu, 8 August 24

Follow us
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೆಹಲಿ ಕ್ಲಬ್ ಹೊರಗೆ ಬೌನ್ಸರ್​ಗೆ ಹೆದರಿಸಿ ಗುಂಡು ಹಾರಿಸಿದ ವಿಡಿಯೋ ವೈರಲ್
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ದೀಪಾವಳಿ ಒಳಗೆ ಸಿದ್ದರಾಮಯ್ಯ ಸರ್ಕಾರ ಪತನ: ಸಿಟಿ ರವಿ
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಕೊನೆಯ ಓವರ್​ನಲ್ಲಿ 5 ಸಿಕ್ಸ್ ಸಿಡಿಸಿ ಇಡೀ ಪಂದ್ಯದ ಚಿತ್ರಣ ಬದಲಿಸಿದ ಮಯಾಂಕ್
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಲಕ್ಷ್ಮಿಯ ಪುತ್ರ ಗಣಪನಿಗೆ ಭಾರೀ ಬಂದೋಬಸ್ತ್​: ಸಿಸಿಟಿವಿ ಕಣ್ಗಾವಲು, ವಿಡಿಯೋ
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಕೊಪ್ಪಳ: ಡ್ಯೂಟಿ ವೇಳೆ ಹಾಲು ಕದ್ದ ಹೆಡ್ ಕಾನ್ಸಟೇಬಲ್, ವಿಡಿಯೋ ವೈರಲ್
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
ಬೈಕ್​ಗೆ ಕಾರು ಡಿಕ್ಕಿ; 10 ಅಡಿ ಎತ್ತರಕ್ಕೆ ಹಾರಿ ಬಿದ್ದ ಸವಾರರು
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್
‘ಕಾಲಾಪತ್ಥರ್’ ಸಿನಿಮಾ ತಂಡದ ಕಡೆಯಿಂದ ಶಿವಣ್ಣಗೆ ಸಿಕ್ತು ಭರ್ಜರಿ ಗಿಫ್ಟ್