ಬಹಳ ಅದ್ಭುತ ಮತ್ತು ಸೊಗಸಾಗಿ ನಿರ್ಮಿಸಲಾಗಿದೆ ದೆಹಲಿಯ ನೂತನ ಕಾವೇರಿ ಕರ್ನಾಟಕ ಭವನ

ಅರುಣ್​ ಕುಮಾರ್​ ಬೆಳ್ಳಿ

Updated on: Apr 02, 2025 | 8:00 PM

ಕರ್ನಾಟಕ ಭವನ ಯಾವುದೇ ಪಕ್ಷಕ್ಕೆ ಸೇರಿದ್ದಲ್ಲ ಅಥವಾ ಮೀಸಲಾದುದಲ್ಲ, ಇದು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಸೇರಿದ್ದು. ಅದನ್ನು ನಾವು ಕಟ್ಟಡದ ಒಳಗೆ ಪ್ರವೇಶಿಸಿದ ನಂತರ ನೋಡಬಹುದು. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಲ ಸಚಿವರು ಉದ್ಘಾಟನಾ ಸಮಾರಂಭದಲ್ಲಿ ಭಾಗಿಯಾಗಿದ್ದರು. ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಸಹ ಇವತ್ತು ಕರ್ನಾಟಕ ಭವನದಲ್ಲಿದ್ದರು.

ದೆಹಲಿ, ಏಪ್ರಿಲ್ 2: ಈಗಾಗಲೇ ವರದಿಯಾಗಿರುವಂತೆ ದೆಹಲಿಯಲ್ಲಿ ನೂತನ ಕರ್ನಾಟಕ ಭವನ ತಯಾರಾಗಿದೆ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಇವತ್ತು ಕಟ್ಟಡದ ಉದ್ಘಾಟನೆಯನ್ನು ನೆರವೇರಿಸಿದರು. ಹೊಸ ಕರ್ನಾಟಕ ಭವನ ಹೇಗಿದೆಯೆಂಬ ಸಹಜ ಕುತೂಹಲ ಕನ್ನಡಿಗರಲ್ಲಿದೆ. ಕಟ್ಟಡವನ್ನು ನಿಸ್ಸಂದೇಹವಾಗಿ ಭವ್ಯವಾಗಿ ನಿರ್ಮಿಸಲಾಗಿದೆ. ಹೊರಗಡೆ ಸುಂದರವಾದ ಪೋರ್ಟಿಕೋ, ಲಾನ್ ಮತ್ತು ಉದ್ಯಾನ ಗಮನ ಸೆಳೆಯುತ್ತವೆ. ಒಳಗಡಿಯಿಡುತ್ತಿದ್ದಂತೆಯೇ ಸಿರಿಗನ್ನಡಂ ಗೆಲ್ಗೆ, ಸಿರುಗನ್ನಡಂ ಬಾಳ್ಗೆ- ಎಲ್ಲಾದರೂ ಇರು ಎಂತಾದರೂ ಇರು ಎಂದೆಂದಿಗೂ ನೀ ಕನ್ನಡವಾಗಿರು ಸಾಲುಗಳು ಜನರನ್ನು ಸ್ವಾಗತಿಸುತ್ತವೆ. ಒಳಗಡೆ ಎಲ್ಲವನ್ನು ಬಹಳ ಅಚ್ಚುಕಟ್ಟಾಗಿ ವಿನ್ಯಾಸಗೊಳಿಸಲಾಗಿದೆ.

ಇದನ್ನೂ ಓದಿ:  ಮುಡಾ ಹಗರಣ: ಕೋರ್ಟ್ ಮೆಟ್ಟಿಲೇರಿದ​ ಇಡಿ, ಸಿದ್ದರಾಮಯ್ಯಗೆ ಢವ ಢವ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.