AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ? ಗೃಹ ಸಚಿವರು ಹೇಳಿದ್ದೇನು ನೋಡಿ

ಹೊಸ ವರ್ಷಾಚರಣೆ ವೇಳೆ ಎಣ್ಣೆ ಮತ್ತಲ್ಲಿರೋರನ್ನು ಪೊಲೀಸರೇ ಮನೆಗೆ ಬಿಡ್ತಾರಾ? ಗೃಹ ಸಚಿವರು ಹೇಳಿದ್ದೇನು ನೋಡಿ

ಭಾವನಾ ಹೆಗಡೆ
|

Updated on: Dec 31, 2025 | 11:32 AM

Share

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅತಿಯಾಗಿ ಮದ್ಯ ಸೇವಿಸಿ ಮತ್ತಲ್ಲಿ ತೇಲುವರನ್ನು ಪೊಲೀಸರೇ ಮನೆಗೆ ಬಿಡುತ್ತಾರೆ ಎಂಬ ಮಾತುಗಳು ಹಲವೆಡೆ ಹರಿದಾಡುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಲ್ಲ ಮದ್ಯ ಸೇವಿಸಿದವರನ್ನು ಮನೆಗೆ ತಲುಪಿಸುವ ವ್ಯವಸ್ಥೆ ಇರುವುದಿಲ್ಲ. ಆದರೆ, ಅತಿಯಾಗಿ ಕುಡಿದು ಪ್ರಜ್ಞೆ ಕಳೆದುಕೊಂಡವರನ್ನು ಅಥವಾ ನಡೆಯಲು ಅಸಾಧ್ಯವಾದವರನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ 15 ರೆಸ್ಟಿಂಗ್ ಪ್ಲೇಸ್‌ಗಳಿಗೆ ಕರೆದೊಯ್ಯಲಾಗುತ್ತದೆ ಎಂದಿದ್ದಾರೆ.

ಬೆಂಗಳೂರು, ಡಿಸೆಂಬರ್ 31: ಹೊಸ ವರ್ಷಾಚರಣೆ ಸಂದರ್ಭದಲ್ಲಿ ಅತಿಯಾಗಿ ಮದ್ಯ ಸೇವಿಸಿ ಮತ್ತಲ್ಲಿ ತೇಲುವರನ್ನು ಪೊಲೀಸರೇ ಮನೆಗೆ ಬಿಡುತ್ತಾರೆ ಎಂಬ ಮಾತುಗಳು ಹಲವೆಡೆ ಹರಿದಾಡುತ್ತಿವೆ. ಈ ಕುರಿತು ಸ್ಪಷ್ಟನೆ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಎಲ್ಲ ಮದ್ಯ ಸೇವಿಸಿದವರನ್ನು ಮನೆಗೆ ತಲುಪಿಸುವ ವ್ಯವಸ್ಥೆ ಇರುವುದಿಲ್ಲ. ಆದರೆ, ಅತಿಯಾಗಿ ಕುಡಿದು ಪ್ರಜ್ಞೆ ಕಳೆದುಕೊಂಡವರನ್ನು ಅಥವಾ ನಡೆಯಲು ಅಸಾಧ್ಯವಾದವರನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗಿರುವ 15 ರೆಸ್ಟಿಂಗ್ ಪ್ಲೇಸ್‌ಗಳಿಗೆ ಕರೆದೊಯ್ಯಲಾಗುತ್ತದೆ ಎಂದಿದ್ದಾರೆ. ಈ ಸ್ಥಳಗಳಲ್ಲಿ, ಮದ್ಯ ಸೇವಿಸಿದವರು ಸಹಜ ಸ್ಥಿತಿಗೆ ಬರುವವರೆಗೆ ಅವರನ್ನಿರಿಸಲಾಗುತ್ತದೆ. ನಂತರ ಅವರ ವಿಳಾಸ ಪಡೆದು ಮನೆಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತದೆ. ವಿಶೇಷವಾಗಿ ಮಹಿಳೆಯರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಈ ಕ್ರಮ ಅತಿ ಮುಖ್ಯವಾಗಿದೆ. ಯಾರು ಕೂಡ ಈ ಸನ್ನಿವೇಶದ ದುರುಪಯೋಗ ಪಡಿಸಿಕೊಳ್ಳದಂತೆ ನೋಡಿಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.