ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ಅಲೋಕ್​​ ಕುಮಾರ್​​ : ದಾಸನ ಬಗ್ಗೆ ಹೇಳಿದ್ದಿಷ್ಟು

Updated on: Dec 15, 2025 | 7:33 PM

ಕೈದಿಗಳಿಗೆ ರಾಜಾತಿಥ್ಯದಿಂದ ಸುದ್ದಿಯಲ್ಲಿರೋ ಪರಪ್ಪನ ಅಗ್ರಹಾರ ಜೈಲಿಗೆ ನೂತನ ಕಾರಾಗೃಹ & ಸುಧಾರಣಾ ಸೇವೆ ಇಲಾಖೆ ಡಿಜಿಪಿ ಡಿಜಿಪಿ ಅಲೋಕ್​​ ಕುಮಾರ್​​ ಭೇಟಿ ನೀಡಿದ್ದು, ಜೈಲಿನ ಹೊರಾಂಗಣ ಸೇರಿ ಪ್ರತಿ ಬ್ಯಾರಕ್​​, ಅಡುಗೆ ಮನೆ, ಆಸ್ಪತ್ರೆ, ಬೇಕರಿಗಳಿಗೂ ತೆರಳಿ ಎಲ್ಲಾ ಪರಿಶೀಲನೆ ಮಾಡಿದರು. ಇದೇ ವೇಳೆ ಡಿಜಿಪಿ ಅಲೋಕ್ ಕುಮಾರ್ ಅವರು ಕೊಲೆ ಆರೋಪಿ ದರ್ಶನ್ ಬ್ಯಾರಕ್ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣದ ವಿಚಾರಣೆ ಬಗ್ಗೆ ವಿಚಾರಣೆ ಪಡೆದುಕೊಂಡಿದ್ದಾರೆ.

ಬೆಂಗಳೂರು, (ಡಿಸೆಂಬರ್ 15): ಕೈದಿಗಳಿಗೆ ರಾಜಾತಿಥ್ಯದಿಂದ ಸುದ್ದಿಯಲ್ಲಿರೋ ಪರಪ್ಪನ ಅಗ್ರಹಾರ ಜೈಲಿಗೆ ನೂತನ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆ ಡಿಜಿಪಿ ಅಲೋಕ್​​ ಕುಮಾರ್​​ ಭೇಟಿ ನೀಡಿದ್ದು, ಜೈಲಿನ ಹೊರಾಂಗಣ ಸೇರಿ ಪ್ರತಿ ಬ್ಯಾರಕ್​​, ಅಡುಗೆ ಮನೆ, ಆಸ್ಪತ್ರೆ, ಬೇಕರಿಗಳಿಗೂ ತೆರಳಿ ಎಲ್ಲಾ ಪರಿಶೀಲನೆ ಮಾಡಿದರು. ಇದೇ ವೇಳೆ ಡಿಜಿಪಿ ಅಲೋಕ್ ಕುಮಾರ್ ಅವರು ಕೊಲೆ ಆರೋಪಿ ದರ್ಶನ್ ಬ್ಯಾರಕ್ ಗೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣದ ವಿಚಾರಣೆ ಬಗ್ಗೆ ವಿಚಾರಣೆ ಪಡೆದುಕೊಂಡಿದ್ದಾರೆ.

ದರ್ಶನ್​ ಬಳಿ ಪ್ರಕರಣದ ಬಗ್ಗೆ ವಿವರಣೆ ಪಡೆದ  ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅಲೋಕ್ ಕುಮಾರ್, ಜೈಲು ಪರಿಶೀಲನೆ ವೇಳೆ ದರ್ಶನ್ ಭೇಟಿ ಮಾಡಿ ಪ್ರಕರಣದ ವಿಚಾರಣೆ ಬಗ್ಗೆ ವಿವರಣೆ ಪಡೆದಿದ್ದೇನೆ. ಯಾವುದೇ ಕುಂದುಕೊರತೆ ಬಗ್ಗೆ ಹೇಳಿಲ್ಲ. ದರ್ಶನ್​​ ಸೇರಿ ಆರು ಮಂದಿ ಒಂದೇ ಬ್ಯಾರಕ್ ನಲ್ಲಿ ಆರಾಮ್ ಇದ್ದಾರೆ ಎಂದು ಸ್ಪಷ್ಟಪಡಿಸಿದರು.

Published on: Dec 15, 2025 07:02 PM
Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More