ಹೊಸ ಶಾಸಕನ ಮುಂದಿವೆ ಹಲವು ಸವಾಲು, ಜನರ ನಿರೀಕ್ಷೆಗೆ ಸ್ಪಂದಿಸುವರೇ ಯೋಗೇಶ್ವರ್?

ಅರುಣ್​ ಕುಮಾರ್​ ಬೆಳ್ಳಿ

Updated on: Nov 29, 2024 | 1:51 PM

ಚನ್ನಪಟ್ಟಣವನ್ನು ಅಭಿವೃದ್ಧಿ ಮಾಡುವ ಅಜೆಂಡಾದೊಂದಿಗೆ ಗೆದ್ದಿರುವ ಯೋಗೇಶ್ವರ್ ಎದುರು ಹಲವಾರು ಸವಾಲುಗಳಿವೆ. ಪಟ್ಟಣದ ಬಸ್ ನಿಲ್ದಾಣವನ್ನು ನವೀಕರಿಸುವ ಬಗ್ಗೆ ಅವರೇ ಪ್ರಚಾರದಲ್ಲಿ ಹೇಳಿಕೊಂಡಿದ್ದರು. ಅಧಿಕಾರದಲ್ಲಿ ಅವರದ್ದೇ ಸರ್ಕಾರ ಇರುವುದರಿಂದ ಮತ್ತು ಕ್ಷೇತ್ರದ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ವಿಶೇಷ ಆಸ್ಥೆ ವಹಿಸಿರುವುದರಿಂದ ಜನರಲ್ಲಿ ಸಹಜವಾಗೇ ನಿರೀಕ್ಷೆ ಹುಟ್ಟಿಕೊಂಡಿವೆ.

ರಾಮನಗರ: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಅಯ್ಕೆಯಾಗಿರುವ ಕಾಂಗ್ರೆಸ್ ಪಕ್ಷದ ಸಿಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ಇಂದು ಶಾಸಕರ ಕಚೇರಿಯನ್ನು ಉದ್ಘಾಟಿಸಿದರು. ಅವರು ಕಚೇರಿy ಬಾಗಿಲಿಗೆ ಕಟ್ಟಿದ ರಿಬ್ಬನ್ ಕಟ್ ಮಾಡುವ ಮೊದಲು ಅರ್ಚಕರು ಪೂಜಾ ಕೈಂಕರ್ಯಗಳನ್ನು ನೆರವೇರಿಸಿ ಶಾಸಕರಿಂದಲೂ ಮಂತ್ರವಾಕ್ಯಗಳನ್ನು ಹೇಳಿಸಿದರು. ಕಚೇರಿ ಉದ್ಘಾಟನೆಗೆ ಮುನ್ನ ಅಲ್ಲಿಗೆ ನಡೆದು ಬಂದ ಹೊಸ ಶಾಸಕನನ್ನು ಅಭಿಮಾನಿಗಳು ಹೂಹಾರ ಹಾಕಿ ಗೌರವಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಮುಖ್ಯಮಂತ್ರಿ ಸಿದ್ದರಾಮಯ್ಯ ನಿವಾಸಕ್ಕೆ ಇದ್ದಕ್ಕಿದ್ದಂತೆ ಭೇಟಿ ನೀಡಿ ಆಶ್ಚರ್ಯ ಮೂಡಿಸಿದ ಯೋಗೇಶ್ವರ್

Published on: Nov 29, 2024 01:51 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.