ಡಿಕೆ ಶಿವಕುಮಾರ್ಗೆ ಸಿಎಂ ಪಟ್ಟ ಬಹುತೇಕ ಖಚಿತ: ರಾಮನಗರದಲ್ಲಿ ಭರ್ಜರಿ ಸಂಭ್ರಮಾಚರಣೆ
ರಾಮನಗರದಲ್ಲಿ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಪಟ್ಟದ ನಿರೀಕ್ಷೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಅಧಿಕೃತ ಘೋಷಣೆಯಾಗಿಲ್ಲದಿದ್ದರೂ, ಸಿಹಿ ಹಂಚಿ ಪಟಾಕಿ ಸಿಡಿಸಿ ಹರ್ಷ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಸಮ್ಮತಿಸಿದ್ದು, ಡಿಕೆಶಿ ಸಿಎಂ ಆಗುತ್ತಾರೆ ಎಂಬ ನಂಬಿಕೆಯ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಈ ಸಂಭ್ರಮಾಚರಣೆ ನಡೆಯುತ್ತಿದೆ.
ರಾಮನಗರ, ಮೇ 27: ಡಿಕೆ ಶಿವಕುಮಾರ್ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂಬ ನಂಬಿಕೆಯೊಂದಿಗೆ ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸುತ್ತಿದ್ದಾರೆ. ಅಧಿಕೃತ ಘೋಷಣೆಗೆ ಮೊದಲೇ ಪಟಾಕಿ ಸಿಡಿಸಿ, ಸಿಹಿ ಹಂಚಿ ಯುವ ಕಾಂಗ್ರೆಸ್ ಕಾರ್ಯಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ. ಆದರೆ, ಅಧಿಕಾರ ಹಂಚಿಕೆ ಸಂಬಂಧ ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ ಡಿಕೆ ಶಿವಕುಮಾರ್ ಅವರಿಂದ ಯಾವುದೇ ಅಧಿಕೃತ ಹೇಳಿಕೆ ಬಂದಿಲ್ಲ. ಆದರೂ, ಸಿದ್ದರಾಮಯ್ಯ ನಾಯಕತ್ವ ಬದಲಾವಣೆಗೆ ಒಪ್ಪಿಕೊಂಡಿದ್ದಾರೆ ಮತ್ತು ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನ ಅಲಂಕರಿಸಲಿದ್ದಾರೆ ಎಂಬ ಬಲವಾದ ನಂಬಿಕೆ ಕಾರ್ಯಕರ್ತರಲ್ಲಿದೆ. ಈ ನಂಬಿಕೆಯ ಹಿನ್ನಲೆಯಲ್ಲಿ, ರಾಮನಗರದಲ್ಲಿ ಸಡಗರ ಮತ್ತು ಸಂಭ್ರಮ ಮುಗಿಲುಮುಟ್ಟಿದೆ. ಪಕ್ಷದ ಕಾರ್ಯಕರ್ತರು ‘ಡಿಕೆ ಶಿವಕುಮಾರ್ ಕೀ ಜೈ, ಮುಖ್ಯಮಂತ್ರಿ ಡಿಕೆ ಶಿವಕುಮಾರ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

