ಸತೀಶ್ ಜಾರಕಿಹೊಳಿಗೆ ಕೊನೆಗೂ ಬಂತು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್!
ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈ ಕಮಾಂಡ್ ಸತೀಶ್ ಜಾರಕಿಹೊಳಿ ಅವರಿಗೆ ಆಫರ್ ನೀಡಿದೆ. ಕೆಸಿ ವೇಣುಗೋಪಾಲ್ ಅವರು ಜಾರಕಿಹೊಳಿಯವರಿಗೆ ಕರೆ ಮಾಡಿ ಈ ಪ್ರಸ್ತಾಪ ಮಾಡಿದ್ದಾರೆ. ಆದರೆ, ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಸಚಿವ ಸ್ಥಾನವನ್ನೂ ನೀಡಬೇಕೆಂಬ ಷರತ್ತು ವಿಧಿಸಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರು, ಮೇ 29: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೈ ಕಮಾಂಡ್ ನಾಯಕರು ಸತೀಶ್ ಜಾರಕಿಹೊಳಿ ಅವರನ್ನು ಆಯ್ಕೆ ಮಾಡಲು ಮುಂದಾಗಿದ್ದಾರೆ ಎಂಬುದು ತಿಳಿದುಬಂದಿದೆ. ಈ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಸತೀಶ್ ಜಾರಕಿಹೊಳಿಗೆ ಕರೆ ಮಾಡಿ ಪ್ರಸ್ತಾಪ ಮಾಡಿದ್ದಾರೆ. ಆದರೆ, ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಒಪ್ಪಿಕೊಳ್ಳಲು ಒಂದು ಪ್ರಮುಖ ಷರತ್ತು ವಿಧಿಸಿದ್ದಾರೆ. ಅವರು ಸಚಿವ ಸ್ಥಾನದ ಜೊತೆಗೆ ಕೆಪಿಸಿಸಿ ಅಧ್ಯಕ್ಷರಾಗಲು ಇಚ್ಛಿಸಿದ್ದಾರೆ ಎಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವುದರಿಂದ, ಡಿ.ಕೆ. ಶಿವಕುಮಾರ್ ಅವರ ಮುಖ್ಯಮಂತ್ರಿ ಹುದ್ದೆಗೆ ಮತ್ತು ಸತೀಶ್ ಜಾರಕಿಹೊಳಿ ಅವರ ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ದಾರಿ ಸುಗಮವಾಗಿದೆ ಎಂದು ವರದಿಯಾಗಿದೆ. ಜಾರಕಿಹೊಳಿ ಅವರು ಕಳೆದ ಒಂದು ವರ್ಷದಿಂದಲೂ ಇದೇ ನಿರೀಕ್ಷೆಯಲ್ಲಿದ್ದರು. ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾದರೆ ಮಾತ್ರ ತಾನು ಕೆಪಿಸಿಸಿ ಅಧ್ಯಕ್ಷನಾಗುವುದಾಗಿ ಅವರು ತಿಳಿಸಿದ್ದರು. ಕೇವಲ ಕೆಪಿಸಿಸಿ ಅಧ್ಯಕ್ಷನಾಗಿ ಅಧಿಕಾರವಿಲ್ಲದೆ ಕೆಲಸ ಮಾಡುವುದು ಕಷ್ಟಕರ ಎಂದು ಜಾರಕಿಹೊಳಿ ಅಭಿಪ್ರಾಯಪಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಹೈ ಕಮಾಂಡ್ ಯಾವ ನಿರ್ಧಾರ ಕೈಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ

