AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ: ಬಳ್ಳಾರಿಯಲ್ಲಿ ಶಂಕಿತ ಬಾಂಬರ್​ಗಾಗಿ ಹುಡುಕಾಟ ನಡೆಸಿರುವ ಎನ್ಐಎ ಅಧಿಕಾರಿಗಳು

ಅವರಿಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಶಂಕಿತನು ಬಾಂಬ್ ಸ್ಫೋಟಿಸಿದ ಬಳಿಕ ಬೆಂಗಳೂರುನಿಂದ ತುಮಕೂರುಗೆ ಹೋಗಿದ್ದಾನೆ ಮತ್ತು ಅಲ್ಲಿಂದ ಬಳ್ಳಾರಿಯ ಕಡೆ ಹೊರಟಿದ್ದಾನೆ. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಿನ್ನೆ ತುಮಕೂರುನಲ್ಲಿ ಹುಡುಕಾಟ ನಡೆಸಿ ಅಲ್ಲಿಂದ ಬಳ್ಳಾರಿಗೆ ತೆರಳಿದ್ದಾರೆ. ದೃಶ್ಯಗಳಲ್ಲಿ ಬಳ್ಳಾರಿ ನಗರದ ಕೇಂದ್ರೀಯ ಬಸ್ ನಿಲ್ದಾಣವನ್ನು ನೋಡಬಹುದು.

ಅರುಣ್​ ಕುಮಾರ್​ ಬೆಳ್ಳಿ
|

Updated on: Mar 07, 2024 | 11:20 AM

Share

ಬಳ್ಳಾರಿ: ಕಳೆದ ವಾರ ಬೆಂಗಳೂರು ಬ್ರೂಕ್ಫೀಲ್ಡ್ ಪ್ರದೇಶದಲ್ಲಿರುವ ದಿ ರಾಮೇಶ್ವರಂ ಕೆಫೆಯಲ್ಲಿ (The Rameshwaram Café) ನಡೆದ ಬಾಂಬ್ ಸ್ಫೋಟ ಪ್ರಕರಣದ ತನಿಖೆ ತೀವ್ರಗೊಂಡಿದೆಯಾದರೂ ಐಈಡಿ ಬಾಂಬನ್ನು ಟೈಮರ್ ಮೂಲಕ ಸಿಡಿಸಿದ ಶಂಕಿತನ (suspected bomber) ಸುಳಿವು ತನಿಖಾ ಏಜೆನ್ಸಿಗಳಿಗೆ (investigating agencies) ಇದುವರೆಗೆ ಸಿಕ್ಕಿಲ್ಲ. ಎನ್ಐಎ ಅಧಿಕಾರಿಗಳು ಅವನನ್ನು ಪತ್ತೆ ಮಾಡುವ ಕಾರ್ಯದಲ್ಲಿ ತೊಡಗಿದ್ದು, ತುಮಕೂರು ಮತ್ತು ಬಳ್ಳಾರಿಯಲ್ಲಿ ಹುಡುಕಾಟ ನಡೆಸಿದ್ದಾರೆ. ಅವರಿಗೆ ಲಭ್ಯವಾಗಿರುವ ಮಾಹಿತಿ ಪ್ರಕಾರ ಶಂಕಿತನು ಬಾಂಬ್ ಸ್ಫೋಟಿಸಿದ ಬಳಿಕ ಬೆಂಗಳೂರುನಿಂದ ತುಮಕೂರುಗೆ ಹೋಗಿದ್ದಾನೆ ಮತ್ತು ಅಲ್ಲಿಂದ ಬಳ್ಳಾರಿಯ ಕಡೆ ಹೊರಟಿದ್ದಾನೆ. ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ನಿನ್ನೆ ತುಮಕೂರುನಲ್ಲಿ ಹುಡುಕಾಟ ನಡೆಸಿ ಅಲ್ಲಿಂದ ಬಳ್ಳಾರಿಗೆ ತೆರಳಿದ್ದಾರೆ. ದೃಶ್ಯಗಳಲ್ಲಿ ಬಳ್ಳಾರಿ ನಗರದ ಕೇಂದ್ರೀಯ ಬಸ್ ನಿಲ್ದಾಣವನ್ನು ನೋಡಬಹುದು. ಎನ್ಐಎ ನ ಹತ್ತು ಅಧಿಕಾರಿಗಳು ಎರಡು ಕಾರರುಗಳಲ್ಲಿ ಬಳ್ಳಾರಿಯಲ್ಲಿ ಬೀಡು ಬಿಟ್ಟಿದ್ದಾರೆ. ಏತನ್ಮಧ್ಯೆ ಬಾಂಬ್ ಸ್ಫೋಟಗೊಳಿಸಿದವನ ಫೋಟೋಗಳನ್ನು ಪೊಲೀಸ್ ಇಲಾಖೆ ಬಿಡುಗಡೆ ಮಾಡಿದ್ದು ಸುಳಿವು ನೀಡಿದವರಿಗೆ ರೂ. 10 ಲಕ್ಷ ಬಹುಮಾನ ಘೋಷಿಸಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಬಾಂಬ್ ಪ್ರಕರಣದ ಬಳಿಕ ಪುನರಾರಂಭಗೊಳ್ಳಲು ಅಣಿಯಾಗುತ್ತಿರುವ ಬೆಂಗಳೂರು ಬ್ರೂಕ್ಫೀಲ್ಡ್ ಪ್ರದೇಶದ ದಿ ರಾಮೇಶ್ವರಂ ಕೆಫೆ

Follow Us
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಖಮೇನಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಅದರಲ್ಲೇ ಸಿಗರೇಟ್ ಹೊತ್ತಿಸಿಕೊಂಡ ಯುವತಿ
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ಚಂದ್ರ ಗ್ರಹಣದಂದು ಮಂತ್ರಾಲಯ ರಾಯರ ಮಠದಲ್ಲಿಲ್ಲ ಯಾವುದೇ ನಿರ್ಬಂಧ!
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
ವಿದಾಯ ಪಂದ್ಯದಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಲಿಸಾ ಹೀಲಿ
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
‘ಹಯಗ್ರೀವ’ ಬಿಡುಗಡೆಗೆ ತೊಂದರೆ ಮಾಡಿದವರಿಗೆ ಧನ್ವೀರ್ ಗೌಡ ಖಡಕ್ ತಿರುಗೇಟು
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಮಾ.03 ಚಂದ್ರಗ್ರಹಣ; 15ನಿಮಿಷಗಳ ಕಾಲ ಗೋಚರಿಸುವ ಗ್ರಹಣದ ಪ್ರಭಾವ ಹೇಗಿರಲಿದೆ?
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಡಿಸಿಎಂ ಡಿಕೆ ಶಿವಕುಮಾರ್ ಮನೆಗೆ ಬಂದವು 3 ಹೊಸ ಎಲೆಕ್ಟ್ರಿಕ್ ಕಾರು!
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಪ್ರಧಾನಿ ಮೋದಿ ಸಹೋದರ ಪ್ರಹ್ಲಾದ್ ದಾಮೋದರ್ ದಾಸ್ ಮೋದಿ ಪುತ್ತೂರಿಗೆ ಭೇಟಿ
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಗ್ರಹಣ ಕಾಲದ ಬಗ್ಗೆ ಅರ್ಚಕ ಸೋಮಸುಂದರ್ ದೀಕ್ಷಿತ್ ಹೇಳಿದ್ದೇನು?
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು
ಮಹಾರಾಷ್ಟ್ರದ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ, 15 ಮಂದಿ ಸಾವು