ಚನ್ನಪಟ್ಟಣಕ್ಕೆ ಎನ್ಡಿಎ ಅಭ್ಯರ್ಥಿಯಾಗಿ ಘೋಷಣೆಯ ಬಳಿಕ ಬೇರೆಯಾಗಿದೆ ನಿಖಿಲ್ ಖದರು
ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರ ನಿಖಿಲ್ ಕುಮಾರಸ್ವಾಮಿಯ ಖದರು ಬೇರೆಯಾಗಿದೆ. ಚುನಾವಣಾ ರಾಜಕೀಯದಲ್ಲಿ ಅವರ ಸಾಧನೆಯೇನೂ ಇಲ್ಲ ಅದರೆ ಚನ್ನಪಟ್ಟಣ ಕ್ಷೇತ್ರದ ಚುನಾವಣೆ ಹೈವೋಲ್ಟೇಜ್ ಮತ್ತು ಪ್ರತಿಷ್ಠೆಯ ಕಾಳಗವಾಗಿರುವುದರಿಂದ ಜನ ನಿಖಿಲ್ ರನ್ನು ನೋಡುವ ದೃಷ್ಟಿಕೋನ ಬದಲಾಗಿದೆ.
ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಇದುವರೆಗೆ ಎರಡು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದು ಜೆಡಿಎಸ್ ಅಭ್ಯರ್ಥಿಯಾಗಿ. ಚನ್ನಪಟ್ಟಣದ ಉಪ ಚುನಾವಣೆಯಲ್ಲೂ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದರೂ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಎನ್ಡಿಎ ಅಭ್ಯರ್ಥಿಯೆಂದು ಬಿಂಬಿಸಲಾಗುತ್ತಿದೆ. ಹಾಗಾಗಿ ಇವತ್ತು ಅವರು ನಗರದ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದಾಗ ಭರ್ಜರಿ ಸ್ವಾಗತ ಸಿಕ್ಕಿತು. ಹಿರಿಯ ಅಥವಾ ಪ್ರಮುಖ ನಾಯಕರಾರೂ ಕಾಣುತ್ತಿಲ್ಲವಾದರೂ ಕಚೇರಿಯಲ್ಲಿದ್ದವರು ನಿಖಿಲ್ಗೆ ಶಾಲು ಹೊದೆಸಿ ಬರಮಾಡಿಕೊಂಡರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಚನ್ನಪಟ್ಟಣ ಉಪಚುನಾವಣೆ: ಎನ್ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ