ಚನ್ನಪಟ್ಟಣಕ್ಕೆ ಎನ್​ಡಿಎ ಅಭ್ಯರ್ಥಿಯಾಗಿ ಘೋಷಣೆಯ ಬಳಿಕ ಬೇರೆಯಾಗಿದೆ ನಿಖಿಲ್ ಖದರು

|

Updated on: Oct 26, 2024 | 6:21 PM

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಎನ್​ಡಿಎ ಅಭ್ಯರ್ಥಿಯಾಗಿ ಕಣಕ್ಕಿಳಿದ ನಂತರ ನಿಖಿಲ್ ಕುಮಾರಸ್ವಾಮಿಯ ಖದರು ಬೇರೆಯಾಗಿದೆ. ಚುನಾವಣಾ ರಾಜಕೀಯದಲ್ಲಿ ಅವರ ಸಾಧನೆಯೇನೂ ಇಲ್ಲ ಅದರೆ ಚನ್ನಪಟ್ಟಣ ಕ್ಷೇತ್ರದ ಚುನಾವಣೆ ಹೈವೋಲ್ಟೇಜ್ ಮತ್ತು ಪ್ರತಿಷ್ಠೆಯ ಕಾಳಗವಾಗಿರುವುದರಿಂದ ಜನ ನಿಖಿಲ್ ರನ್ನು ನೋಡುವ ದೃಷ್ಟಿಕೋನ ಬದಲಾಗಿದೆ.

ಬೆಂಗಳೂರು: ನಿಖಿಲ್ ಕುಮಾರಸ್ವಾಮಿ ಇದುವರೆಗೆ ಎರಡು ಚುನಾವಣೆಗಳಲ್ಲಿ ಸ್ಪರ್ಧಿಸಿದ್ದು ಜೆಡಿಎಸ್ ಅಭ್ಯರ್ಥಿಯಾಗಿ. ಚನ್ನಪಟ್ಟಣದ ಉಪ ಚುನಾವಣೆಯಲ್ಲೂ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದರೂ ಪಕ್ಷವು ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಎನ್​ಡಿಎ ಅಭ್ಯರ್ಥಿಯೆಂದು ಬಿಂಬಿಸಲಾಗುತ್ತಿದೆ. ಹಾಗಾಗಿ ಇವತ್ತು ಅವರು ನಗರದ ಬಿಜೆಪಿ ಕೇಂದ್ರ ಕಚೇರಿಗೆ ಆಗಮಿಸಿದಾಗ ಭರ್ಜರಿ ಸ್ವಾಗತ ಸಿಕ್ಕಿತು. ಹಿರಿಯ ಅಥವಾ ಪ್ರಮುಖ ನಾಯಕರಾರೂ ಕಾಣುತ್ತಿಲ್ಲವಾದರೂ ಕಚೇರಿಯಲ್ಲಿದ್ದವರು ನಿಖಿಲ್​ಗೆ ಶಾಲು ಹೊದೆಸಿ ಬರಮಾಡಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಚನ್ನಪಟ್ಟಣ ಉಪಚುನಾವಣೆ: ಎನ್​ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ

Follow us on