ಮೈಸೂರು: ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ

ಚಾಮುಂಡೇಶ್ವರಿ ತಾಯಿಗೆ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಶಿರವಾಗಿ ನಮಿಸಿ ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ ತಾಯಿಯ ದರ್ಶನದ ಬಳಿಕ ನಿಖಿಲ್ ಕುಮಾರಸ್ವಾಮಿ ಅವರು ಚನ್ನಪಟ್ಟಣ ಉಪಚುನಾವಣೆ ಅಭ್ಯರ್ಥಿ ಸಂಬಂಧ ಮಾತನಾಡಿದ್ದಾರೆ.

ಮೈಸೂರು: ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
| Updated By: ಆಯೇಷಾ ಬಾನು

Updated on: Sep 18, 2024 | 2:54 PM

ಮೈಸೂರು, ಸೆ.18: ನಾಡ ಅಧಿದೇವತೆ ಚಾಮುಂಡೇಶ್ವರಿ ತಾಯಿಗೆ ಜೆಡಿಎಸ್​ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಚಾಮುಂಡಿ ಬೆಟ್ಟಕ್ಕೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಶಿರವಾಗಿ ನಮಿಸಿ ಪೂಜೆ ಸಲ್ಲಿಸಿದ್ದಾರೆ. ನಿಖಿಲ್ ಕುಮಾರಸ್ವಾಮಿಗೆ ಶಾಸಕ ಹರೀಶ್ ಗೌಡ ಮಾಜಿ ಶಾಸಕ ಅನ್ನದಾನಿ, ಎಂಎಲ್ ಸಿ ಮಂಜೇಗೌಡ ಸೇರಿದಂತೆ ಸ್ಥಳೀಯ ಜೆಡಿಎಸ್ ಮುಖಂಡರು ಸಾಥ್ ನೀಡಿದ್ದಾರೆ.

ಚಾಮುಂಡೇಶ್ವರಿ ತಾಯಿ ದರ್ಶನದ ಬಳಿಕ ನಿಖಿಲ್ ಕುಮಾರಸ್ವಾಮಿಯವರು ಚನ್ನಪಟ್ಟಣ ಉಪಚುನಾವಣೆಗೆ NDA ಅಭ್ಯರ್ಥಿ ಘೋಷಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಉಪ ಚುನಾವಣೆಯಲ್ಲಿ ಎನ್​ಡಿಎ ಅಭ್ಯರ್ಥಿ ಕಣಕ್ಕಿಳಿಯಲಿದ್ದಾರೆ. ಈಗಾಗಲೇ ಸಿ.ಪಿ.ಯೋಗೇಶ್ವರ್ ಕೂಡ ಸಭೆಗಳನ್ನು ಮಾಡುತ್ತಿದ್ದಾರೆ. ನಾವು ಕೂಡ ನಮ್ಮ ಕಾರ್ಯಕರ್ತರ ಜೊತೆ ಸಭೆ ಮಾಡುತ್ತಿದ್ದೇನೆ. ಒಟ್ಟಾರೆ ಎನ್​​ಡಿಎ ಅಭ್ಯರ್ಥಿ ಕಣಕ್ಕಿಳಿಯುತ್ತಾರೆ. ನಾನು ನಿಲ್ಲುತ್ತೇನೋ, ಇನ್ಯಾರೋ ನಿಲ್ಲುತ್ತಾರೋ ಆ ಪ್ರಶ್ನೆ ಇಲ್ಲ. ಇನ್ನೂ ಉಪಚುನಾವಣೆಗೆ ದಿನಾಂಕ ಪ್ರಕಟ ಆಗಿಲ್ಲ. ನಮ್ಮ ಕಾರ್ಯಕರ್ತರ ಭಾವನೆಗೆ ತಕ್ಕಂತೆ ಕೆಲಸ ಮಾಡುತ್ತೇವೆ ಎಂದರು.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Follow us