ರಂದೀಪ್ ಸುರ್ಜೇವಾಲಾ ರಾಜ್ಯದ ಸೂಪರ್ ಸಿಎಂ ಆಗಿರಬಹುದಾದ ಸಂಶಯ ಕಾಡುತ್ತಿದೆ: ನಿಖಿಲ್ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Jul 17, 2025 | 3:11 PM

ರಾಜ್ಯದಲ್ಲಿ ನಡೆಯುತ್ತಿರುವ ವಿದ್ಯಮಾನಗಳನ್ನು ಕೊಂಚ ಗಮನಿಸಿ. ಕಾಂಗ್ರೆಸ್ ಶಾಸಕರು ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳಿಗೆ ಅನುದಾನ ಬಿಡುಗಡೆ ಮಾಡಿಸಿಕೊಳ್ಳಲು ಮುಖ್ಯಮಂತ್ರಿಯ ಬಳಿ ಹೋಗದೆ ರಂದೀಪ್ ಸುರ್ಜೆವಾಲಾ ಅವರಲ್ಲಿಗೆ ಹೋಗುತ್ತಿದ್ದಾರೆ, ರಾಜ್ಯದಲ್ಲಿ ಸರ್ಕಾರ ಹೇಗೆ ನಡೆಯುತ್ತಿದೆ ಅಂತ ಅರ್ಥಮಾಡಿಕೊಳ್ಳಲು ಇದಕ್ಕಿಂತ ಉದಾಹರಣೆ ಬೇಕೇ ಎಂದು ನಿಖಿಲ್ ಕುಮಾರಸ್ವಾಮಿ ಕೇಳಿದರು.

ಬಾಗಲಕೋಟೆ, ಜುಲೈ 17: ಕನ್ನಡನಾಡಿನ ಏಳೂವರೆ ಕೋಟಿ ಜನ ಸಿದ್ದರಾಮಯ್ಯನವರೇ (Siddaramaiah) ರಾಜ್ಯದ ಮುಖ್ಯಮಂತ್ರಿ ಅಂತ ಭಾವಿಸಿದ್ದರು, ಅದರೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯದ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸುರ್ಜೇವಾಲಾ ಅವರು ಪದೇಪದೆ ದೆಹಲಿಯಿಂದ ಬೆಂಗಳೂರಿಗೆ ಬರುತ್ತಿರುವುದನ್ನು ಮತ್ತು ಶಾಸಕರು ಅವರನ್ನು ಭೇಟಿಯಾಗುತ್ತಿರುವುದು ನೋಡಿದರೆ ಅವರೇ ರಾಜ್ಯದ ಸೂಪರ್ ಸಿಎಂ ಆಗಿದ್ದಾರೇನೋ ಎಂಬ ಸಂಶಯ ಮೂಡುತ್ತಿದೆ ಎಂದು ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಹೇಳಿದರು. ಮುಖ್ಯಮಂತ್ರಿ ಸ್ಥಾನ ಸಂವಿಧಾನಿಕ ಹುದ್ದೆಯಾದರೂ ಸುರ್ಜೇವಾಲಾ ಅವರು ಅದನ್ನು ಜಿಪಿಎ ಮಾಡಿಕೊಂಡಿರಬಹುದು ಎಂದು ಜನಸಾಮಾನ್ಯರು ಭಾವಿಸುತ್ತಿದ್ದಾರೆ ಎಂದು ನಿಖಿಲ್ ಹೇಳಿದರು.

ಇದನ್ನೂ ಓದಿ:   ಜನರೊಂದಿಗೆ ಜನತಾದಳ ಕಾರ್ಯಕ್ರಮ ಕಾರ್ಯಕರ್ತರಲ್ಲಿ ಹೊಸ ಹುಮ್ಮಸ್ಸನ್ನು ತರುತ್ತಿದೆ: ನಿಖಿಲ್ ಕುಮಾರಸ್ವಾಮಿ

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.