‘ಸಿನಿಮಾ ಮಾಡೋದನ್ನು ನಿಲ್ಲಿಸಿದ್ದೇನೆ, ನಾನು ಫುಲ್​ಟೈಮ್ ರಾಜಕಾರಣಿ’; ಚಿತ್ರರಂಗಕ್ಕೆ ನಿಖಿಲ್ ಗುಡ್​ಬೈ

Edited By:

Updated on: Jun 07, 2024 | 12:37 PM

ಮಂಡ್ಯದಲ್ಲಿ ನಿಖಿಲ್ ಅವರು ಪ್ರಮುಖ ಸುದ್ದಿಗೋಷ್ಠಿ ನಡೆಸಿದ್ದಾರೆ. 24x7 ನಾನು ರಾಜಕೀಯದಲ್ಲಿ ಆ್ಯಕ್ಟೀವ್ ಆಗುತ್ತೇನೆ.ಈ ಮೂಲಕ ಅವರು ಸಿನಿಮಾ ರಂಗ ತೊರಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ಸುದ್ದಿಗೋಷ್ಠಿಯ ವಿಡಿಯೋ ಇಲ್ಲಿದೆ. 

ನಿಖಿಲ್ ಕುಮಾರಸ್ವಾಮಿ (Nikhil Kumar) ಅವರು ಇಷ್ಟುವರ್ಷಗಳ ಕಾಲ ಸಿನಿಮಾ ರಂಗ ಹಾಗೂ ರಾಜಕೀಯ ಎರಡರಲ್ಲೂ ತೊಡಗಿಕೊಂಡಿದ್ದರು. ಇತ್ತೀಚೆಗೆ ಅವರು ರಾಜಕೀಯದಲ್ಲಿ ಹೆಚ್ಚು ಒಲವು ತೋರಿಸಿದ್ದರು. ಈಗ ಸಿನಿಮಾಗೆ ನಿಖಿಲ್​ ಕುಮಾರಸ್ವಾಮಿ ಗುಡ್​ಬೈ ಹೇಳಿದರೇ ಎನ್ನುವ ಅನುಮಾನ ಮೂಡಿದೆ. ಮಂಡ್ಯದಲ್ಲಿ ನಿಖಿಲ್ ಅವರು ಪ್ರಮುಖ ಸುದ್ದಿಗೋಷ್ಠಿ ನಡೆಸಿದ್ದಾರೆ. ಈ ವೇಳೆ ಅವರು ಚಿತ್ರರಂಗ ತೊರೆಯೋ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದಾರೆ. ‘‘ಸಿನಿಮಾ ಮಾಡೋದನ್ನು ನಿಲ್ಲಿಸಿದ್ದೇನೆ. ಪಕ್ಷ ಕಟ್ಟುವ ಜವಾಬ್ದಾರಿಯನ್ನು ನನಗೆ ನೀಡಿದ್ದಾರೆ.  ನಾನು‌ ಇನ್ಮುಂದೆ ಪಕ್ಷ ಕಟ್ಟುವ ಕಡೆ ಗಮನ ಕೊಡುತ್ತೇನೆ.  ರಾಜ್ಯಾದ್ಯಂತ ಸಂಚಾರ ಮಾಡಿ ಪಕ್ಷ ಸಂಘಟನೆ ಮಾಡ್ತೇನೆ. ನಾನು ಫುಲ್‌ ಟೈಮ್ ರಾಜಕಾರಣಿ’ ಎಂದು ಅವರು ಘೋಷಿಸಿದ್ದಾರೆ. ಈ ಮೂಲಕ ಅವರು ಸಿನಿಮಾ ರಂಗ ತೊರಯುತ್ತಾರಾ ಎನ್ನುವ ಪ್ರಶ್ನೆ ಮೂಡಿದೆ. ‘ಜಾಗ್ವಾರ್’ ನಿಖಿಲ್ ಮೊದಲ ಸಿನಿಮಾ. ‘ಸೀತಾರಾಮ ಕಲ್ಯಾಣ’, ‘ಕುರುಕ್ಷೇತ್ರ’, ‘ರೈಡರ್​’ ಸಿನಿಮಾದಲ್ಲಿ ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Jun 07, 2024 12:31 PM
Follow Us
Prashantha B

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More