ದೊಡ್ಡಮಳೂರು ಗ್ರಾಮದಲ್ಲಿ ನಿಖಿಲ್ ಕುಮಾರಸ್ವಾಮಿ ಚುನಾವಣಾ ಪ್ರಚಾರ, ಮತಯಾಚನೆ

ಅರುಣ್​ ಕುಮಾರ್​ ಬೆಳ್ಳಿ

Updated on: Oct 29, 2024 | 12:50 PM

ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಎನ್​ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಎಲ್ಲರೂ ತಿಂಡಿ ತಿನ್ನುವಾಗ ಬಿಜೆಪಿ ಮುಖಂಡರೊಬ್ಬರು ತಮ್ಮ ಪಕ್ಷದ ಶಾಲನ್ನು ನಿಖಿಲ್ ಹೆಗಲ ಮೇಲೆ ಹೊದಿಸಿದರು. ಗುಂಪಿನಲ್ಲಿ ಕೆಲ ಬಿಜೆಪಿ ಮುಖಂಡರೂ ಇದ್ದರು.

ಚನ್ನಪಟ್ಟಣ: ಸಿಪಿ ಯೋಗೇಶ್ವರ್ ಕೋಟೆಹೊಲ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದರೆ ಅವರ ಪ್ರತಿಸ್ಪರ್ಧಿ ನಿಖಿಲ್ ಕುಮಾರಸ್ವಾಮಿ ದೊಡ್ಡಮಳೂರು ಗ್ರಾಮದಲ್ಲಿ ಪ್ರಚಾರಕ್ಕಾಗಿ ಪ್ರತ್ಯಕ್ಷರಾದರು. ಗ್ರಾಮದ ಜೆಡಿಎಸ್ ಮುಖಂಡರೊಬ್ಬರ ಮನೆಯಲ್ಲಿ ತಿಂಡಿಗೆ ಏರ್ಪಾಟು ಮಾಡಲಾಗಿತ್ತು. ಮನೆಯ ಮಹಿಳೆಯರು ನಿಖಿಲ್​ಗೆ ಆರತಿ ಬೆಳಗಿ ಮನೆಯಲ್ಲಿ ಬರಮಾಡಿಕೊಳ್ಳುವುದನ್ನು ಕಾಣಬಹುದು. ಪ್ರಾಯಶಃ ಮನೆಯಲ್ಲೇ ತಿಂಡಿ ತಿಂದು ಬಂದಿದ್ದ ನಿಖಿಲ್ ಒಂದು ಇಡ್ಲಿಯನ್ನು ಮಾತ್ರ ತಟ್ಟೆಗೆ ಹಾಕಿಸಿಕೊಂಡರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಒಂದೆಡೆ ನಿಖಿಲ್ ಮತ್ತೊಂದೆಡೆ ಕುಮಾರಸ್ವಾಮಿ ಹಾಗೂ ಯದುವೀರ್; ಎನ್​ಡಿಎ ಭರ್ಜರಿ ಮತಬೇಟೆ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.