AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರವಾರ ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿದು 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ, ಜಿಲ್ಲಾಡಳಿತದಿಂದ ರಕ್ಷಣಾ ಕಾರ್ಯಾಚರಣೆ

ಕಾರವಾರ ಬಳಿ ಹೆದ್ದಾರಿ ಮೇಲೆ ಗುಡ್ಡ ಕುಸಿದು 9 ಜನ ಮಣ್ಣಿನಡಿ ಸಿಲುಕಿರುವ ಶಂಕೆ, ಜಿಲ್ಲಾಡಳಿತದಿಂದ ರಕ್ಷಣಾ ಕಾರ್ಯಾಚರಣೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Jul 16, 2024 | 2:43 PM

Share

ಶಿರೂರು ಬಳಿ ಗುಡ್ಡ ಕುಸಿತದಿಂದಾಗಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ರಸ್ತೆ ಬಂದ್ ಆಗಿದ್ದು ವಾಹನ ಸಂಚಾರ ಸ್ಥಗಿತಗೊಂಡಿದೆ. ಮಣ್ಣಲ್ಲಿ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯಚರಣೆಯನ್ನು ಜಿಲ್ಲಾಡಳಿತ ಆರಂಭಿಸಿದೆ. ಜೆಸಿಬಿಗಳ ಮೂಲಕ ಮಣ್ಣನ್ನು ತೆರವುಗೊಳಿಸಲಾಗುತ್ತಿದೆ.

ಕಾರವಾರ: ಜಿಲ್ಲೆಯಲ್ಲಿ ಗುಡ್ಡ ಕುಸಿತದಿಂದ ಭಾರೀ ಅನಾಹುತ ಸಂಭವಿಸಿದೆ. ಅಂಕೋಲಾ ತಾಲ್ಲೂಕಿನ ಶಿರೂರು ಬಳಿ ದುರ್ಘಟನೆ ನಡೆದಿದ್ದು ಕುಸಿದ ಗುಡ್ಡದ ಮಣ್ಣಿನ ಅಡಿಯಲ್ಲಿ 9 ಜನ ಸಿಲುಕಿರುವರೆಂದು ಶಂಕಿಸಲಾಗಿದೆ. ಮಣ್ಣಿನಲ್ಲಿ ಸಿಲುಕಿರುವವರ ಪೈಕಿ ಒಂದೇ ಕುಟಂಬಕ್ಕೆ ಸೇರಿದ 5 ಜನರಿದ್ದಾರೆ ಎಂದು ಹೇಳಲಾಗುತ್ತಿದೆ. ಲಕ್ಷ್ಮಣ ನಾಯಕ್, ರೋಷನ್, ಆವಂತಿಕಾ, ಶಾಂತಿ ನಾಯಕ್, ಜಗನ್ನಾಥ ನಾಯಕ್ ಇವರೆಲ್ಲ ಒಂದೇ ಕುಟುಂಬಕ್ಕೆ ಸೇರಿದವರಾಗಿದ್ದು ಕಾರಲ್ಲಿ ಹೋಗುತ್ತಿದ್ದಾಗ ಗುಡ್ಡದ ಮಣ್ಣು ವಾಹನದ ಮೇಲೆ ಕುಸಿದಿದೆ. ಪ್ರತ್ಯಕ್ಷದರ್ಶಿಯೊಬ್ಬರು ನೀಡಿರುವ ವಿವರಣೆಯ ಪ್ರಕಾರ ಇನ್ನೂ ಇಬ್ಬರು ಅಲ್ಲಿಯೇ ಇದ್ದ ಒಂದು ಚಿಕ್ಕ ಗೂಡಂಗಡಿಯಲ್ಲಿ ಚಹಾ ಕುಡಿಯುತ್ಯಿದ್ದರಂತೆ, ಗುಡ್ಡ ಕುಸಿದಾಗ ಅವರಿಬ್ಬರು ಮತ್ತು ಟೀ ಸ್ಟಾಲ್ ನಡೆಸುತ್ತಿದ್ದ ಇಬ್ಬರು ಮಣ್ಣಿನಡಿ ಸಿಲುಕಿದ್ದಾರೆ. ಗುಡ್ಡ ಕುಸಿತದಿಂದ ಇನ್ನೊಂದು ಅನಾಹುತವೂ ಜರುಗಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಟ್ಯಾಂಕರ್ ಒಂದು ಕುಸಿದ ಮಣ್ಣಿನ ರಭಸಕ್ಕೆ ಪಕ್ಕದಲ್ಲೇ ಹರಿಯುವ ನದಿಗೆ ಜಾರಿ ಹೋಗಿದೆ. ಅದೇ ಟ್ಯಾಂಕರ್ ನ ಡ್ರೈವರ್ ಮತ್ತು ಕ್ಲೀನರ್ ಗೂಡಂಗಡಿಯಲ್ಲಿ ಚಹಾ ಕುಡಿಯುತ್ತಿದ್ದರಂತೆ ಎಂದು ಪ್ರತ್ಯಕ್ಷದರ್ಶಿ ಹೇಳುತ್ತಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಕೊಡಗಿನಲ್ಲಿ ಮಳೆ ಅಬ್ಬರಕ್ಕೆ ಶಾಲೆ ಹಿಂಬದಿ ಗುಡ್ಡ ಕುಸಿತ: ರಜೆ ಇದ್ದಿದ್ದರಿಂದ ತಪ್ಪಿದ ಭಾರೀ ಅನಾಹುತ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.