ನೇಹಾ ಕೊಲೆಯಾದ ದಿನದಿಂದ ಇವತ್ತಿನವರೆಗೆ ನನ್ನ ಹೇಳಿಕೆ ಮತ್ತು ನಿಲುವಿನಲ್ಲಿ ಬದಲಾವಣೆ ಇಲ್ಲ: ನಿರಂಜನ್ ಹಿರೇಮಠ

ಕೊಲೆ ಮಾಡುವ ಮೊದಲು ಕೆಲ ದಿನಗಳ ಕಾಲ ಫಯಾಜ್ ತಮ್ಮ ಮನೆ ಬಳಿ ಸುಳಿದಾಡಿದ್ದನ್ನು ನೆರೆಹೊರೆಯವರು ನೋಡಿದ್ದಾರೆ ಎಂದ ನಿರಂಜನ್ ತಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುವುದಾಗಿ ಹೇಳಿದರು.

ನೇಹಾ ಕೊಲೆಯಾದ ದಿನದಿಂದ ಇವತ್ತಿನವರೆಗೆ ನನ್ನ ಹೇಳಿಕೆ ಮತ್ತು ನಿಲುವಿನಲ್ಲಿ ಬದಲಾವಣೆ ಇಲ್ಲ: ನಿರಂಜನ್ ಹಿರೇಮಠ
|

Updated on: Apr 25, 2024 | 3:54 PM

ಹುಬ್ಬಳ್ಳಿ: ಸಿಐಡಿ ಅಧಿಕಾರಿಗಳು ಮನೆಗೆ ಬಂದು ಹೋದ ಬಳಿಕ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ನೇಹಾ ಹಿರೇಮಠ ತಂದೆ ನಿರಂಜನ ಹಿರೇಮಠ (Niranjan Hiremath), ಅಧಿಕಾರಿಗಳು ಒಂದಷ್ಟು ಮಾಹಿತಿ ತಮ್ಮಿಂದ ಸಂಗ್ರಹಿಸಿಕೊಂಡು ಹೋಗಿದ್ದಾರೆ ಅದರೆ ಅದನ್ನೆಲ್ಲ ಮಾಧ್ಯಮಗಳ ಮುಂದೆ ಬಹಿರಂಗಪಡಿಲಾಗಲ್ಲ ಎಂದು ಹೇಳಿದರು. ನೇಹಾ ಕೊಲೆಯಾದ ಮೊದಲೆರಡು ದಿನಗಳ ಕಾಲ ಮಾಧ್ಯಮಗಳೊಂದಿಗೆ ಮಾತಾಡುವಾಗ ಅವರು ತಮ್ಮ ಪಕ್ಷದ ನಾಯಕರನ್ನೇ ತೆಗಳುತ್ತಿದ್ದರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಹಾಗೂ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ನೇಹಾ ಹತ್ಯೆಯ ಬಗ್ಗೆ ನೀಡಿದ ಹೇಳಿಕೆಗಳ ಬಗ್ಗೆ ಅಸಹನೆ ಮತ್ತು ಅಸಮಾಧಾನ ವ್ಯಕ್ತಪಡಿಸುತ್ತಿದ್ದರು. ಅದರೆ, ಈಗ ಅವರು ಬೇರೆ ರೀತಿ ಮಾತಾಡುತ್ತಿದ್ದಾರೆ. ಈ ಅಂಶವನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಕಾರ್ಪೋರೇಟರ್ ಆಗಿರುವ ನಿರಂಜನ ಗಮನಕ್ಕೆ ತಂದಾಗ ಆರೋಪವನ್ನು ಅಲ್ಲಗಳೆದರು. ನೇಹಾ ಕೊಲೆಯಾದ ದಿನದಿಂದ ತಮ್ಮ ಹೇಳಿಕೆಯಾಗಲೀ ಅಥವಾ ನಿಲುವಾಗಲೀ ಬದಲಾಗಿಲ್ಲ. ತನ್ನ ಮಗಳ ಸಾವಿಗೆ ನ್ಯಾಯ ಸಿಗಬೇಕು, ಪೊಲೀಸರು ಪ್ರಕರಣದ ಆಳಕ್ಕೆ ಇಳಿದು ತನಿಖೆ ಮಾಡಬೇಕು ಮತ್ತು ಹತ್ಯೆ ಹಿಂದಿನ ಷಡ್ಯಂತ್ರವನ್ನು ಬಯಲು ಮಾಡಬೇಕು ಅನ್ನೋದು ತಮ್ಮ ಕುಟುಂದ ಉದ್ದೇಶವಾಗಿದೆ ಎಂದರು. ಕೊಲೆ ಮಾಡುವ ಮೊದಲು ಕೆಲ ದಿನಗಳ ಕಾಲ ಫಯಾಜ್ ತಮ್ಮ ಮನೆ ಬಳಿ ಸುಳಿದಾಡಿದ್ದನ್ನು ನೆರೆಹೊರೆಯವರು ನೋಡಿದ್ದಾರೆ ಎಂದ ನಿರಂಜನ್ ತಮ್ಮ ಕುಟುಂಬಕ್ಕೆ ಭದ್ರತೆ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡುವುದಾಗಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಫಯಾಜ್ ತಂದೆತಾಯಿ ಕ್ಷಮೆ ಕೇಳಿದರೆ ನನ್ನ ಮಗಳ ಆತ್ಮಕ್ಕೆ ಶಾಂತಿ ಸಿಗುತ್ತದೆಯೇ? ನಿರಂಜನ ಹಿರೇಮಠ

Follow us
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
ಗೃಹಲಕ್ಷ್ಮಿ ಯೋಜನೆ ಹಣ ಫಲಾನುಭವಿಗಳಿಗೆ ನಿಯಮಿತವಾಗಿ ತಲುಪುತ್ತಿದೆ: ಸಚಿವೆ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
Jog Falls: ಹಾಲ್ನೊರೆಯಂತೆ ಕಂಗೊಳಿಸುತ್ತಿದೆ ವಿಶ್ವವಿಖ್ಯಾತ ಜೋಗ ಜಲಪಾತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಸಿಎಂ ಪತ್ನಿ ಅಣ್ಣ ನಕಲಿ ಕಾಗದಪತ್ರ ಸೃಷ್ಟಿಸಿದ್ದಾರೆ: ಆರ್​ಟಿಐ ಕಾರ್ಯಕರ್ತ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
ಪ್ರಾಂಶುಪಾಲಕಿಯನ್ನು ಬಲವಂತವಾಗಿ ಹೊರತಬ್ಬಿದ ಶಾಲಾ ಆಡಳಿತ ಮಂಡಳಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
Video: 60 ದಶಕದ ಹಾಡನ್ನು ರೀ ಕ್ರಿಯೇಟ್ ಮಾಡಿದ ಮುಕೇಶ್ ಹಾಗೂ ನೀತಾ ದಂಪತಿ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ
ಮುಂಡರಗಿಯ ಸಿಂಗಟಾಲೂರ್ ಬ್ಯಾರೇಜ್ ಭರ್ತಿ, 45,000 ಕ್ಯೂಸೆಕ್ಸ್ ನೀರು ನದಿಗೆ