ದಾಖಲೆ ತಿದ್ದುವ ದೈನೇಸಿ ಸ್ಥಿತಿ ಸರ್ಕಾರಕ್ಕೆ ಬಂದಿಲ್ಲ, ಅಂಥ ನೀಚ ಕೆಲಸ ಮಾಡಲ್ಲ: ಭೈರತಿ ಸುರೇಶ್, ಸಚಿವ

Updated on: Aug 21, 2024 | 5:03 PM

ಮೈಸೂರು ಅಭಿವೃದ್ಧಿ ಪ್ರಾಧಿಕಾರ ರಚಿಸಿದ ಪರ್ಯಾಯ ಬಡಾವಣೆಯಲ್ಲಿ ತನಗೆ ಸೈಟುಗಳನ್ನು ನೀಡಬೇಕೆಂದು ಪಾರ್ವತಿ ಸಿದ್ದರಾಮಯ್ಯ ಅವರು ತಮ್ಮ ಅರ್ಜಿಯಲ್ಲಿ ಬರೆದಿದ್ದಾರೆಯೇ ಹೊರತು ಪ್ರಾಧಿಕಾರ ಅವರಿಗೆ ನೀಡಿದ ವಿಜಯನಗರ ಬಡಾವಣೆಯಲ್ಲೇ ನಿವೇಶನ ಕೊಡಿ ಅಂತ ಬರೆದಿಲ್ಲ ಎಂದು ಸಚಿವ ಭೈರತಿ ಸುರೇಶ್ ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮುಡಾ ಹಗರಣದಲ್ಲಿ ದಾಖಲಾತಿಗಳನ್ನು ವ್ಹೈಟ್ನರ್ ಬಳಸಿ ತಿದ್ದಿರುವ ಆರೋಪಗಳಿಗೆ ಸಂಬಂಧಿಸಿದಂತೆ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಮಾಧ್ಯಮಗಳಲ್ಲಿ ಹರಿದಾಡುತ್ತಿರುವ ವದಂತಿಗಳು ಆಧಾರರಹಿತ ಮತ್ತು ಸತ್ಯಕ್ಕೆ ದೂರವಾಗಿರುವಂಥವು, ಅಂಥ ದೈನೇಸಿ ಸ್ಥಿತಿ ಸರ್ಕಾರಕ್ಕೆ ಬಂದಿಲ್ಲ, ಅಂಥ ನೀಚ ಕೆಲಸವನ್ನು ಸರ್ಕಾರದ ಭಾಗವಾಗಿರುವ ಯಾರೊಬ್ಬರೂ ಮಾಡಲ್ಲ ಎಂದು ಹೇಳಿದರು. ಮುಡಾ ಪ್ರಕರಣವೀಗ ನ್ಯಾಯಾಲಯದಲ್ಲಿರುವುದರಿಂದ ಅದರ ಬಗ್ಗೆ ಮಾತಾಡುವುದು ಸೂಕ್ತವಲ್ಲ ಎಂದು ಹೇಳಿದ ಸಚಿವ ಸುರೇಶ್, ಮಾಧ್ಯಮದವರು ಕೇಳುತ್ತಿರುವುದರಿಂದ ಹೇಳುವ ಪ್ರಸಂಗ ಬಂದಿದೆ ಎಂದರು. ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಅವರು ತಾವು ಅರ್ಜಿಯಲ್ಲಿ ಬರೆಯುವಾಗ ಏನೋ ತಪ್ಪು ಬರೆದಿದ್ದಾರೆ, ವ್ಹೈಟ್ನರ್ ಬಳಸಿ ಬರೆದ ತಪ್ಪನ್ನು ಸರಿಪಡಿಸಿದ್ದಾರೆ, ಅದರಲ್ಲಿ ತಪ್ಪು ಎಲ್ಲಿಂದ ಬಂತು ಎಂದು ಸುರೇಶ್ ಪ್ರಶ್ನಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಮುಡಾ ಹಗರಣ ಬೆಳಕಿಗೆ ಬಂದ ಮೇಲೆ ಸಿಎಂ ಪತ್ನಿ ಬರೆದ ಪತ್ರ ತಿರುಚಿದ್ರಾ ಅಧಿಕಾರಿಗಳು? ಅನುಮಾನಕ್ಕೆ ಇದೆ ಕಾರಣ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More