ಸಿದ್ದರಾಮಯ್ಯ ಬಿಟ್ಟರೆ ತಾನೇ ಮುಖ್ಯಮಂತ್ರಿ ಅಂತ ಹಿಂದೆ ರಾಜ್ಯದಲ್ಲಿ ಯಾರೂ ಹೇಳಿಲ್ಲ: ಆರ್ ಅಶೋಕ

ಅರುಣ್​ ಕುಮಾರ್​ ಬೆಳ್ಳಿ

Updated on: Nov 12, 2024 | 3:52 PM

ಡಿಕೆ ಶಿವಕುಮಾರ್ ನಾನೇ ಮುಖ್ಯಮಂತ್ರಿ ಅಂತ ಚನ್ನಪಟ್ಟಣದಲ್ಲಿ ಹೇಳಿಕೊಂಡು ಓಡಾಡುತ್ತಿದ್ದಾರೆ, ಕಾಂಗ್ರೆಸ್ ಶಾಸಕರು ಸಿದ್ದರಾಮಯ್ಯರಿಂದ ಬೇಸತ್ತಿದ್ದಾರೆ, ಅವರ ಕ್ಷೇತ್ರಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಬಿಡಿಗಾಸೂ ನೀಡಿಲ್ಲ, ಅವರ ಜೊತೆ ಇದ್ದರೆ ಕಳ್ಳೆಬೀಜವೂ ದಕ್ಕಲಾರದು ಅಂತ ಶಾಸಕರಿಗೆ ಮನವರಿಕೆಯಾಗಿದೆ ಎಂದು ಅಶೋಕ ಹೇಳಿದರು.

ಚಿತ್ರದುರ್ಗ: ಕಾಂಗ್ರೆಸ್ ಸರ್ಕಾರ ಉಳಿ ಸಾಧ್ಯತೆ ಇಲ್ಲ, ದಿನಬೆಳಗಾದರೆ ಮಠಾಧೀಶರು, ಜ್ಯೋತಿಷಿಗಳು ರಾಜಕಾರಣಿಗಳು ಸಿದ್ದರಾಮಯ್ಯ ಸರ್ಕಾರ ಬಿದ್ದುಹೋಗುತ್ತದೆ ಅಂತ ಭವಿಷ್ಯ ನುಡಿಯುತ್ತಾರೆ ಎಂದು ವಿಷಕ್ಷ ನಾಯಕ ಆರ್ ಅಶೋಕ ಹೇಳಿದರು. ಸಿದ್ದರಾಮಯ್ಯ ನಾನೇ ಮುಖ್ಯಮಂತ್ರಿ ಅಂತ ಕನಿಷ್ಠ ಒಂದು ಸಾವಿರ ಸಲ ಹೇಳಿರಬಹುದು, ಅವರ ಸ್ಥಾನ ಭದ್ರವಿಲ್ಲ, ಜೊಳ್ಳಿನ ಮೇಲೆ ಕೂತು ಅವರು ಅಧಿಕಾರ ನಡೆಸುತ್ತಿದ್ದಾರೆ, ಸರ್ಕಾರ ಉಳಿಯಲ್ಲ ಅವರಿಗೂ ಗೊತ್ತಿದೆ, ಹಾಗಾಗಿ ಇರುವಷ್ಟು ದಿನ ಕಾಸು ಮಾಡಿಕೊಳ್ಳುವ ಬಗ್ಗೆ ಅವರು ಯೋಚಿಸುತ್ತಿರಬಹುದು ಎಂದು ಅಶೋಕ ಹೇಳಿದರು

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:    ಕಾಂಗ್ರೆಸ್​ 60 ಪರ್ಸೆಂಟ್​ ಲಂಚ ಹೊಡೆದು ರಾಜ್ಯವನ್ನ ಲೂಟಿ ಮಾಡುತ್ತಿದೆ: ಅಶೋಕ್​ ತಿರುಗೇಟು

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.