ಶಾಮನೂರು ಶಿವಶಂಕರಪ್ಪನವರ ಮಗ ಸೇರಿದಂತೆ 7 ಲಿಂಗಾಯತ ಸಚಿವರು ಸಂಪುಟದಲ್ಲಿದ್ದಾರೆ, ಯಾರಿಗೂ ಅನ್ಯಾಯವಾಗಿಲ್ಲ: ಹೆಚ್ ಸಿ ಮಹಾದೆವಪ್ಪ, ಸಚಿವ

ಇನ್ನಾರು ತಿಂಗಳಲ್ಲಿ ಸರ್ಕಾರ ಉರುಳುತ್ತದೆ ಎಂದು ಸಿಟಿ ರವಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವ, ಅವರೆಲ್ಲೋ ಹಗಲುಗನಸು ಕಾನುತ್ತಿದ್ದಾರೆ, 135 ಸ್ಥಾನಗಳನ್ನು ಗೆದ್ದಿರುವ ಸರ್ಕಾರ ಉರುಳುತ್ತದೆ ಅಂತ ಹೇಳುತ್ತಾರೆಂದರೆ ಪ್ರಜಾಪ್ರಭುತ್ವ ವ್ವವಸ್ತೆಯಲ್ಲಿ ಇವರಿಗೆ ನಂಬಿಕೆ ಇಲ್ಲವೆಂದೇ ಅಂತರ್ಥ ಎಂದು ಮಹಾದೇವಪ್ಪ ಹೇಳಿದರು.

ಶಾಮನೂರು ಶಿವಶಂಕರಪ್ಪನವರ ಮಗ ಸೇರಿದಂತೆ 7 ಲಿಂಗಾಯತ ಸಚಿವರು ಸಂಪುಟದಲ್ಲಿದ್ದಾರೆ, ಯಾರಿಗೂ ಅನ್ಯಾಯವಾಗಿಲ್ಲ: ಹೆಚ್ ಸಿ ಮಹಾದೆವಪ್ಪ, ಸಚಿವ
|

Updated on:Oct 03, 2023 | 7:02 PM

ಮೈಸೂರು: ನಗರದಲ್ಲಿಂದು ಸುದ್ದಿಗೋಷ್ಟಿ ನಡೆಸಿ ಮಾತಾಡಿದ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್ ಸಿ ಮಹದೇವಪ್ಪ (HC Mahadevappa), ಶಾಮನೂರು ಶಿವಶಂಕರಪ್ಪನವರು (Shamanur Shivashankarappa) ಹೇಳಿರುವಂತೆ ಸಚಿವ ಸಂಪುಟದಲ್ಲಾಗಲೀ ಅಧಿಕಾರಿಗಳ ವಿಷಯದಲ್ಲಾಗಲೀ ಲಿಂಗಾಯತ ಸಮುದಾಯಕ್ಕೆ ಅನ್ಯಾಯವೇನೂ ಆಗಿಲ್ಲ, ಅವರ ಮಗ ಎಸ್ ಎಸ್ ಮಲ್ಲಿಕಾರ್ಜುನ (SS Mallikarjun) ಸೇರಿದಂತೆ ಒಟ್ಟು 7 ಲಿಂಗಾಯತ ಸಚಿವರಿದ್ದಾರೆ, ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಜಾಯಮಾನ ಮುಖ್ಯಮಂತ್ರಿ ಸಿದ್ದರಾಮಯ್ಯನವರದಲ್ಲ ಎಂದು ಹೇಳಿದರು. ಭಾರತ ಒಂದು ಜಾತ್ಯಾತೀತ ರಾಷ್ಟ್ರವಾಗಿದೆ, ಸಿದ್ದರಾಮಯ್ಯ ಸರ್ಕಾರ ಎಲ್ಲ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಆಡಳಿತ ನಡೆಸುತ್ತಿದೆ ಎಂದು ಅವರು ಹೇಳಿದರು.

ಅಖಿಲ ಭಾರತ ವೀರಶೈವ ಸಂಘದ ಅಧ್ಯಕ್ಷರಾಗಿರುವ ಶಿವಶಂಕರಪ್ಪನರಿಗೆ ಯಾವುದೋ ಅಧಿಕಾರಿ ತನಗೆ ಬೇಕಾದ ಪೋಸ್ಟಿಂಗ್ ಸಿಗದ ಬಗ್ಗೆ ದೂರಿರುತ್ತಾನೆ. ಅದಕ್ಕೆ ಅವರು ಹಾಗೆ ಹೇಳಿರುತ್ತಾರೆ ವಿನಃ ಬೇರೆ ಯಾವುದೇ ಉದ್ದೇಶ ಅವರಿಗಿರೋದಿಲ್ಲ ಎಂದು ಮಹಾದೇವಪ್ಪ ಹೇಳಿದರು. ಇನ್ನಾರು ತಿಂಗಳಲ್ಲಿ ಸರ್ಕಾರ ಉರುಳುತ್ತದೆ ಎಂದು ಸಿಟಿ ರವಿ ಹೇಳಿರುವುದಕ್ಕೆ ಪ್ರತಿಕ್ರಿಯಿಸಿದ ಸಚಿವ, ಅವರೆಲ್ಲೋ ಹಗಲುಗನಸು ಕಾನುತ್ತಿದ್ದಾರೆ, 135 ಸ್ಥಾನಗಳನ್ನು ಗೆದ್ದಿರುವ ಸರ್ಕಾರ ಉರುಳುತ್ತದೆ ಅಂತ ಹೇಳುತ್ತಾರೆಂದರೆ ಪ್ರಜಾಪ್ರಭುತ್ವ ವ್ವವಸ್ತೆಯಲ್ಲಿ ಇವರಿಗೆ ನಂಬಿಕೆ ಇಲ್ಲವೆಂದೇ ಅಂತರ್ಥ ಎಂದು ಮಹಾದೇವಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:01 pm, Tue, 3 October 23

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​