Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮ್ಮ ಸರ್ಕಾರದಲ್ಲಿ ಯಾವುದೇ ಧರ್ಮ, ಜಾತಿಗೆ ಅನ್ಯಾಯವಾಗಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ

ನಮ್ಮ ಸರ್ಕಾರದಲ್ಲಿ ಯಾವುದೇ ಧರ್ಮ, ಜಾತಿಗೆ ಅನ್ಯಾಯವಾಗಲ್ಲ: ಸಿದ್ದರಾಮಯ್ಯ, ಮುಖ್ಯಮಂತ್ರಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Sep 30, 2023 | 4:58 PM

ಅವರು ಅಧಿಕಾರಿಗಳ ವಿಷಯದಲ್ಲಿ ಹಾಗೆ ಹೇಳಿರುವರೆಂದು ಪತ್ರಕರ್ತರೊಬ್ಬರು ತಿಳಿಸಿದಾಗ ತಮ್ಮ ಸರ್ಕಾರದಲ್ಲಿ ಯಾವುದೇ ಧರ್ಮ, ಸಮುದಾಯದವರಿಗೆ ಅನ್ಯಾಯವಾಗೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಡಿಜೆ ಹಳ್ಳಿ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ವರದಿಯನ್ನು ನೋಡಿಲ್ಲ, ನೋಡದೆ ಕಾಮೆಂಟ್ ಮಾಡಕ್ಕಾಗಲ್ಲ ಎಂದು ಹೇಳಿದರು.

ಬೆಂಗಳೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಮ್ಮ ಸರ್ಕಾರದಲ್ಲಿ ಲಿಂಗಾಯತರಿಗೆ (Lingayat community) ಅನ್ಯಾಯವಾಗುತಿಲ್ಲ ಎಂದು ಹೇಳಿದರು. ಪಕ್ಷದ ಅತ್ಯಂತ ಹಿರಿಯ ನಾಯಕನಾಗಿರುವ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರು ಸಿದ್ದರಾಮಯ್ಯ ಸರ್ಕಾರದಲ್ಲಿ ಲಿಂಗಾಯತರಿಗೆ ಅನ್ಯಾಯವಾಗುತ್ತಿದೆ ಎಂದು ಹೇಳಿರುವುದನ್ನು ಮುಖ್ಯಮಂತ್ರಿಗೆ ತಿಳಿಸಿದಾಗ, ಶಿವಶಂಕರಪ್ಪನವರು ಯಾವ ಆರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ; ಆದರೆ, ತಮ್ಮ ಸಂಪುಟದಲ್ಲಿ 7 ಸಚಿವರು ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ ಅಂತ ಹೇಳಿದರು. ಅವರು ಅಧಿಕಾರಿಗಳ ವಿಷಯದಲ್ಲಿ ಹಾಗೆ ಹೇಳಿರುವರೆಂದು ಪತ್ರಕರ್ತರೊಬ್ಬರು ತಿಳಿಸಿದಾಗ ತಮ್ಮ ಸರ್ಕಾರದಲ್ಲಿ ಯಾವುದೇ ಧರ್ಮ, ಸಮುದಾಯದವರಿಗೆ ಅನ್ಯಾಯವಾಗೋದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು. ಡಿಜೆ ಹಳ್ಳಿ ಪ್ರಕರಣ ಬಗ್ಗೆ ಕೇಳಿದ ಪ್ರಶ್ನೆಗೆ ಸಿದ್ದರಾಮಯ್ಯ, ವರದಿಯನ್ನು ನೋಡಿಲ್ಲ, ನೋಡದೆ ಕಾಮೆಂಟ್ ಮಾಡಕ್ಕಾಗಲ್ಲ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ