AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Who would be CM? ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಿರ್ದಿಷ್ಟವಾಗಿ ಯಾವುದೇ ಸಮುದಾಯದಿಂದ ಕೂಗು ಕೇಳಿ ಬರಲಿಲ್ಲ: ಪ್ರಿಯಾಂಕ್ ಖರ್ಗೆ

Who would be CM? ಶಾಸಕಾಂಗ ಸಭೆಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಿರ್ದಿಷ್ಟವಾಗಿ ಯಾವುದೇ ಸಮುದಾಯದಿಂದ ಕೂಗು ಕೇಳಿ ಬರಲಿಲ್ಲ: ಪ್ರಿಯಾಂಕ್ ಖರ್ಗೆ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: May 15, 2023 | 12:30 PM

Share

ಒಳ್ಳೆಯ ನಾಯಕತ್ವ ಮತ್ತು ಆಡಳಿತ ನೀಡಬೇಕೆನ್ನುವುದು ಮಾತ್ರ ಕಾಂಗ್ರೆಸ್ ಪಕ್ಷದ ಗುರಿಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಬೆಂಗಳೂರು: ನಿನ್ನೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಏನೆಲ್ಲ ನಡೆಯಿತು ಅಂತ ಚುನಾವನೆಯಲ್ಲಿ ಗೆದ್ದ ಯಾವುದೇ ಅಭ್ಯರ್ಥಿ ಬಾಯಿ ಬಿಡುತ್ತಿಲ್ಲ. ಚಿತಾಪೂರ (Chitapur) ಕ್ಷೇತ್ರದಿಂದ ಆಯ್ಕೆಯಾಗಿರುವ ಪ್ರಿಯಾಂಕ್ ಖರ್ಗೆ (Priyank Kharge) ಸಹ ಗುಟ್ಟು ಬಿಟ್ಟುಕೊಡಲಿಲ್ಲ. ನಿನ್ನೆ ಕೇವಲ ಅಭಿಪ್ರಾಯ ಸಂಗ್ರಹಣೆ ಮಾತ್ರ ನಡೆದಿದೆ, ವೀಕ್ಷಕರು (observers) ದೆಹಲಿಗೆ ವಾಪಸ್ಸು ಹೋಗಿ ಹೈಕಮಾಂಡ್ ಗೆ ಅಭಿಪ್ರಾಯಗಳನ್ನು ನೀಡುತ್ತಾರೆ, ಅಂತಿಮ ನಿರ್ಣಯ ಹೈಕಮಾಂಡ್ ತೆಗೆದುಕೊಳ್ಳುತ್ತದೆ ಮತ್ತು ಎಲ್ಲರೂ ಆದಕ್ಕೆ ಬದ್ಧರಾಗಿರುತ್ತಾರೆ ಎಂದು ಖರ್ಗೆ ಹೇಳಿದರು. ಯಾವುದೇ ನಿರ್ದಿಷ್ಟ ಸಮುದಾಯದಿಂದ ಸಭೆಯಲ್ಲಿ ಕೂಗು ಕೇಳಿಬರಲಿಲ್ಲ, ಒಳ್ಳೆಯ ನಾಯಕತ್ವ ಮತ್ತು ಆಡಳಿತ ನೀಡಬೇಕೆನ್ನುವುದು ಮಾತ್ರ ಕಾಂಗ್ರೆಸ್ ಪಕ್ಷದ ಗುರಿಯಾಗಿದೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.