ಸ್ವಾಭಿಮಾನ ಸಮಾವೇಶಕ್ಕೆ ಕಾಂಗ್ರೆಸ್ ನಾಯಕರ ವಿರೋಧವಿಲ್ಲ, ಇದು ಸಿದ್ದರಾಮಯ್ಯರ ಸಮಾರಂಭ ಅಲ್ಲ: ಲಕ್ಷ್ಮಣ್
ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ವಿರಸ ಹುಟ್ಟಿಸುವ ಕುತಂತ್ರವನ್ನು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಮಾಡುತ್ತಿದ್ದಾರೆ, ಈ ಪಕ್ಷಗಳು ಮೊದಲಿಗೆ ತಮ್ಮ ನಾಯಕರ ನಡುವಿನ ಜಗಳಗಳನ್ನು ಸರಿಮಾಡಿಕೊಳ್ಳುವ ಬದಲು ಕಾಂಗ್ರೆಸ್ ಪಕ್ಷದಲ್ಲಿ ಏನು ನಡೆಯುತ್ತಿದೆ ಅಂತ ಅರಿಯಲು ಹೆಚ್ಚು ಉತ್ಸುಕತೆ ತೋರುತ್ತವೆ ಎಂದು ಲಕ್ಷ್ಮಣ್ ಹೇಳಿದರು.
ಮೈಸೂರು: ಹಾಸನಲ್ಲಿ ಡಿಸೆಂಬರ್ 5 ರಂದು ನಡೆಯಲಿರುವ ಸ್ವಾಭಿಮಾನ ಸಮಾವೇಶಕ್ಕೆ ಯಾವುದೇ ಕಾರ್ಯಕರ್ತನ ವಿರೋಧವಿಲ್ಲ, ಕಾಂಗ್ರೆಸ್ ವತಿಯಿಂದಲೇ ಈ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು ಶೋಷಿತ ಸಮುದಾಯಗಳ ಒಕ್ಕೂಟ ಕೈಜೋಡಿಸಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಹೇಳಿದರು. ನಗರದಲ್ಲಿ ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು, ಡಿಕೆ ಶಿವಕಮಾರ್ ಬಣದ ವಿರೋಧವಿದೆ ಅಂತ ಹೇಳುಲಾಗುತ್ತಿದೆ, ಅದರೆ ಕೆಪಿಸಿಸಿ ಅಧ್ಯಕ್ಷರೇ ಸಮಾವೇಶದಲ್ಲಿ ಭಾಷಣ ಮಾಡಲಿದ್ದಾರೆ, ಇದು ಯಾವ ಕಾರಣಕ್ಕೂ ಸಿದ್ದರಾಮಯ್ಯ ಅವರ ವೈಯಕ್ತಿಕ ಕಾರ್ಯಕ್ರಮವಲ್ಲ ಎಂದು ಹೇಳುವ ಲಕ್ಷ್ಮಣ್ ಎಐಸಿಸಿಗೆ ಬರೆದಿರುವ ಪತ್ರದ ಬಗ್ಗೆ ಕೇಳಿದಾಗ ತೊದಲುತ್ತಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಡಿಸೆಂಬರ್ 5ರ ಹಾಸನ ಸ್ವಾಭಿಮಾನ ಸಮಾವೇಶದ ಬಗ್ಗೆ ವಿವರಣೆ ನೀಡಿದ ಸಚಿವ ಹೆಚ್ ಸಿ ಮಹದೇವಪ್ಪ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್ ಸ್ಪೈಡಿ ಕ್ಯಾಚ್ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ

