Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸಮಿತಿ ಕೇಳುವ ಎಲ್ಲ ದಾಖಲೆಗಳನ್ನು ಕೊಡಲು ಎಂಬಿ ಪಾಟೀಲ್ ಡಿಸಿಗೆ ಹೇಳಿದ್ದಾರೆ: ಜಮೀರ್

ಬಿಜೆಪಿ ಸಮಿತಿ ಕೇಳುವ ಎಲ್ಲ ದಾಖಲೆಗಳನ್ನು ಕೊಡಲು ಎಂಬಿ ಪಾಟೀಲ್ ಡಿಸಿಗೆ ಹೇಳಿದ್ದಾರೆ: ಜಮೀರ್

ಅರುಣ್​ ಕುಮಾರ್​ ಬೆಳ್ಳಿ
|

Updated on:Oct 30, 2024 | 12:04 PM

ಬಿಜೆಪಿ ನಾಯಕರ ಪ್ರತಿಭಟನೆ ಮಾಡೋದಾದರೆ ಮಾಡಲಿ, ಪಕ್ಷದ ಒಂದು ಸಮಿತಿ ರೈತರ ಸಮಸ್ಯೆ ಆಲಿಸಲು ಇವತ್ತು ವಿಜಯಪುರಕ್ಕೆ ಬರಲಿದೆ, ಅದರ ಸದಸ್ಯರು ಯಾವುದೇ ಕಾಗದಪತ್ರ ಕೇಳಿದರೂ ಕೊಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಜಿಲ್ಲಾಧಿಕಾರಿಯವರಿಗೆ ಆದೇಶ ನೀಡಿದ್ದಾರೆ ಎಂದು ಜಮೀರ್ ಹೇಳಿದರು.

ಹುಬ್ಬಳ್ಳಿ: ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತಾಡಿದ ವಕ್ಫ್ ಸಚಿವ ಬಿಜೆಡ್ ಜಮೀರ್ ಅಹ್ಮದ್ ಖಾನ್, ರಾಜ್ಯದ ಯಾವುದೇ ಜಿಲ್ಲೆಯ ರೈತನ ಜಮೀನಿಗೆ ತೊಂದರೆಯಾಗಲ್ಲ, ವಕ್ಫ್ ಜಮೀನು ಸಂಬಂಧಿಸಿದಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ, ರಾಜ್ಯದಲ್ಲಿ ಮೂರು ಉಪ ಚುನಾವಣೆಗಳಿವೆ ಮತ್ತು ಪಕ್ಕದ ರಾಜ್ಯ ಮಹಾರಾಷ್ಟ್ರದಲ್ಲಿವಿಧಾನಸಭಾ ಚುನಾವಣೆ ನಡೆಯಲಿರುವುದರಿಂದ ಕಾಂಗ್ರೆಸ್ ವಿರುದ್ಧ ಆರೋಪ ಮಾಡಲು ವಿಷಯಗಳು ಇಲ್ಲದ ಕಾರಣ ಬಿಜೆಪಿ ನಾಯಕರು ರೈತರನ್ನು ಎತ್ತಿಕಟ್ಟುತ್ತಿದ್ದಾರೆ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ರೈತರ ನೆಮ್ಮದಿ ಹಾಳು ಮಾಡಿದ ಜಮೀರ್ ಅಹ್ಮದ್ ವಿರುದ್ಧ ಸಿಎಂ ಸಿದ್ದರಾಮಯ್ಯ ಕ್ರಮ ಜರುಗಿಸಬೇಕು

Published on: Oct 30, 2024 12:04 PM