ಸೋಲದೇವನಹಳ್ಳಿ, ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ

ಬೆಂಗಳೂರಿನಲ್ಲಿ ಟ್ರಾಫಿಕ್ ಕಿರಿಕಿರಿ ಜೊತೆಗೆ ಅಪರಾಧ ಚಟುವಟಿಕೆಗಳಿಗೇನು ಕಮ್ಮಿ ಇಲ್ಲ. ನಗರ ಬೆಳೆದಂತೆ ಅಪರಾಧ ಕೃತ್ಯಗಳು ಸಹ ಹೆಚ್ಚಾಗುತ್ತಲೇ ಇವೆ. ಯಾವ ಏರಿಯಾದಲ್ಲಿ ಏನು ಆಗುತ್ತೇ ಎನ್ನುವುದೇ ಗೊತ್ತಾಗಲ್ಲ. ಹೀಗಿರುವಾಗ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ.

ಬೆಂಗಳೂರು, (ನವೆಂಬರ್ 10): ಬೆಂಗಳೂರು ಎನ್ನುವ ಮಾಯಾನಗರಿಯಲ್ಲಿ ಟ್ರಾಫಿಕ್ ಕಿರಿಕಿರಿ ಜೊತೆಗೆ ಅಪರಾಧ ಚಟುವಟಿಕೆಗಳಿಗೇನು ಕಮ್ಮಿ ಇಲ್ಲ. ನಗರ ಬೆಳೆದಂತೆ ಅಪರಾಧ ಕೃತ್ಯಗಳು ಸಹ ಹೆಚ್ಚಾಗುತ್ತಲೇ ಇವೆ. ಯಾವ ಏರಿಯಾದಲ್ಲಿ ಏನು ಆಗುತ್ತೇ ಎನ್ನುವುದೇ ಗೊತ್ತಾಗಲ್ಲ. ಹೀಗಿರುವಾಗ ಬೆಂಗಳೂರಿನ ಸೋಲದೇವನಹಳ್ಳಿ ಹಾಗೂ ಗಂಗಮ್ಮನಗುಡಿ ಪೊಲೀಸ್ ಠಾಣೆಗಳಿಗೆ ಇನ್ಸ್‌ಪೆಕ್ಟರ್​ಗಳೇ ಇಲ್ಲ. ಹೌದು… ಇನ್ಸ್‌ಪೆಕ್ಟರ್ ಸಿದ್ದೇಗೌಡ ನಿವೃತ್ತಿ ಬಳಿಕ 6 ತಿಂಗಳಿಂದ ಗಂಗಮ್ಮನಗುಡಿ ಠಾಣೆಗೆ ಇನ್ಸ್‌ಪೆಕ್ಟರ್ ನೇಮಕವಾಗಿಲ್ಲ. ಇನ್ನು ಸೋಲದೇವನಹಳ್ಳಿ ಇನ್ಸ್‌ಪೆಕ್ಟರ್‌ ಹರಿಯಪ್ಪ ನಿವೃತ್ತಿಯಾಗಿದ್ದು, ಈ ಹುದ್ದೆ 3 ತಿಂಗಳಿನಿಂದ ಖಾಲಿ ಇದೆ. ಈ ಎರಡು ಠಾಣಾ ವ್ಯಾಪ್ತಿಗಳಲ್ಲಿ ಡ್ರಗ್ಸ್​ ಪ್ರಕರಣಗಳು ಹೆಚ್ಚು. ಆದರೂ ಸಹ ಗೃಹ ಇಲಾಖೆ ಇದುವರೆಗೂ ಇನ್ಸ್​ಪೆಕ್ಟರ್​ಗಳನ್ನು ನಿಯೋಜನೆ ಮಾಡಿಲ್ಲ.

ಆಸ್ತಿ ಕಲಹ ಸೇರಿದಂತೆ ಇತರೆ ಪ್ರಕರಣಗಳು ಈ ಠಾಣೆಗಳಿಗೆ ಬರುತ್ತವೆ. ಆದ್ರೆ, ಈ ಠಾಣೆಗಳ ಸಿಬ್ಬಂದಿ, ದೂರು ನೀಡಲು ಹೋದವರಿಗೆ ಇನ್ಸ್​ಪೆಕ್ಟರ್​ ಇಲ್ಲ ಎನ್ನುವ ಉಡಾಫೆ ಉತ್ತರ ನೀಡಿ ಕಳುಹಿಸುತ್ತಿದ್ದಾರೆ ಎನ್ನುವ ಆರೋಪಗಳು ಸಹ ಕೇಳಿಬರುತ್ತಿವೆ. ಇಂತಹ ದೊಡ್ಡ ಸಿಟಿಯಲ್ಲಿ ಆರು ತಿಂಗಳು ಗಟ್ಟಲೇ ಓರ್ವ ಇನ್ಸ್​ಪೆಕ್ಟರ್​ನ ನೇಮಕ ಮಾಡಿಲ್ಲ ಅಂದ್ರೆ ಕಾನೂನು ಸುವ್ಯವಸ್ಥೆ ಕಥೆ ಏನು?

ಬಿ ಮೂರ್ತಿ, ನೆಲಮಂಗಲ

ದೊಡ್ಡಬಳ್ಳಾಪುರ ತಾಲ್ಲೂಕಿನ ಮಧುರೆ ಹೋಬಳಿಯ ಬೀರಯ್ಯನಪಾಳ್ಯದ ಮೂರ್ತಿ.ಬಿ.ನಾನು ಓದಿದ್ದು ಪಿಯುಸಿ,ಹೆಸರಘಟ್ಟ ಫಿಲ್ಮ್ ಆ್ಯಂಡ್ ಟಿವಿ ಕಾಲೇಜಿನಲ್ಲಿ ಕೆಲಸಗಾರನಾಗಿ ಕ್ಯಾಮರಾ ಕಲಿತು ದಿನಪತ್ರಿಕೆಗಳಿಗೆ ಪೋಟೋ ಕಳಿಸುವ ಕೆಲಸ ಬಳಿಕ 17ವರ್ಷದ ಹಿಂದೆ ನೇರವಾಗಿ ಟಿವಿನೈ ನಲ್ಲಿ ಕ್ಯಾಮರಾಮೆನ್ ಕೆಲಸಕ್ಕೆ ಸೇರಲಾಯಿತು. ಕಳೆದ 6ವರ್ಷದ ಹಿಂದೆ ಇದ್ದಕ್ಕಿದ್ದಂತೆ ಕ್ರೈಂ ಸಿಟಿ,ರಕ್ತಮಂಗಲ ಅಂತೆಲ್ಲ ಖ್ಯಾತಿ ಪಡೆದಿದ್ದ ನೆಲಮಂಗಲಕ್ಕೆ ಕ್ಯಾಮರಾ ಮ್ಯಾನ್ ಹಾಗೂ ವರದಿಗಾರನಾಗಿ ಕೆಲಸ ಮಾಡುವ ಅವಕಾಶ ನಮ್ಮ ಸೀನಿಯರ್ ಗಳಿಂದ ಕೂಡಿ ಬಂತು,ತನಗಿಂತ ಚನ್ನಾಗಿ ಕೆಲಸ ಮಾಡುವ ಕ್ಯಾಮರಾ ಮ್ಯಾನ್ ಗಳು ಇದ್ದರು ನನಗೆ ಅವಕಾಶ ಸಿಕ್ಕಿದ್ದಕ್ಕೆ ನನಗೆ ಹೆಮ್ಮೆ ಇದೆ,ನಾನು ಈ ಭಾಗದಲ್ಲಿ ಬಂದಾಗಿನಿಂದ ರೌಡಿಶೀಟರಗಳ ಉಪಟಳ ಕಂಟ್ರೋಲ್ಗೆ ಬಂದಿದೆ,ಯಾವುದೇ ಒಂದು ಚಿಕ್ಕದಾಗಲಿ ದೊಡ್ಡ ಮಟ್ಟದ ಕ್ರೈಂ ಅದ್ರೂ ಮೊದಲು ನಮ್ಮಲ್ಲಿ ನ್ಯೂಸ್ ಕವರ್ ಆಗಿರುತ್ತೆ,

Read More
Follow Us