AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಹುಟ್ಟುಹಬ್ಬಕ್ಕೆ ರಾಹುಲ್ ಗಾಂಧಿಯವರನ್ನು ಮಾತ್ರ ಆಹ್ವಾನಿಸಲಾಗಿದೆ, ಬೇರೆ ಪಕ್ಷದವರನ್ನು ಕರೆದಿಲ್ಲ: ಸಿದ್ದರಾಮಯ್ಯ

ನನ್ನ ಹುಟ್ಟುಹಬ್ಬಕ್ಕೆ ರಾಹುಲ್ ಗಾಂಧಿಯವರನ್ನು ಮಾತ್ರ ಆಹ್ವಾನಿಸಲಾಗಿದೆ, ಬೇರೆ ಪಕ್ಷದವರನ್ನು ಕರೆದಿಲ್ಲ: ಸಿದ್ದರಾಮಯ್ಯ

TV9 Web
| Updated By: ಅರುಣ್​ ಕುಮಾರ್​ ಬೆಳ್ಳಿ|

Updated on: Jul 08, 2022 | 1:22 PM

Share

ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆಗೆ ರಾಹುಲ್ ಗಾಂಧಿಯವರಿಗೆ ಮಾತ್ರ ಆಹ್ವಾನ ನೀಡಲಾಗಿದೆ, ಬೇರೆ ಪಕ್ಷದವರನ್ನು ಆಹ್ವಾನಿಸಿಲ್ಲ ಎಂದು ಹೇಳಿದರು. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸೇರಿ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದರಿಂದ ಇದು ಪಕ್ಷದ ಕಾರ್ಯಕ್ರಮವಾಗಲಿದೆ ಎಂದು  ಹೇಳಿದರು.

ಬೆಂಗಳೂರು: ತಮ್ಮ 75ನೇ ಹುಟ್ಟುಹಬ್ಬದ ಆಚರಣೆ ಕುರಿತು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು (siddaramaiah) ಗುರುವಾರ ಕೆಪಿಸಿಸಿ (KPCC) ಅಧ್ಯಕ್ಷ ಡಿಕೆ ಶಿವಕುಮಾರ (DK Shivakumar) ಹೇಳಿದ್ದನ್ನೇ ಪುನರುಚ್ಛರಿಸಿದರು. ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಶುಕ್ರವಾರ ಬೆಳಗ್ಗೆ ಶಿವಕುಮಾರ ಮತ್ತು ಇತರ ನಾಯಕರೊಂದಿಗೆ ಉಪಹಾರ ಸೇವಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಸಿದ್ದರಾಮಯ್ಯ ಹುಟ್ಟುಹಬ್ಬ ಆಚರಣೆಗೆ ರಾಹುಲ್ ಗಾಂಧಿಯವರಿಗೆ ಮಾತ್ರ ಆಹ್ವಾನ ನೀಡಲಾಗಿದೆ, ಬೇರೆ ಪಕ್ಷದವರನ್ನು ಆಹ್ವಾನಿಸಿಲ್ಲ ಎಂದು ಹೇಳಿದರು. ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಸೇರಿ ಹುಟ್ಟುಹಬ್ಬವನ್ನು ಆಚರಿಸುತ್ತಿರುವುದರಿಂದ ಇದು ಪಕ್ಷದ ಕಾರ್ಯಕ್ರಮವಾಗಲಿದೆ ಎಂದು  ಹೇಳಿದರು.

ಇದನ್ನೂ ಓದಿ:  Viral Video: ಹಲವು ಅಡಿಗಳಷ್ಟು ಎತ್ತರದಲ್ಲಿ ಕ್ರೇನ್​ನಲ್ಲಿ ಸಿಕ್ಕಿಹಾಕಿಕೊಂಡ ವ್ಯಕ್ತಿ, ಮುಂದೇನಾಯ್ತು ಎಂದು ಈ ವಿಡಿಯೋ ನೋಡಿ