AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಂಡರ್​​ಗಳಿಗಾಗಿ ಜನ ಕ್ಯೂ ನಿಲ್ಲುತ್ತಿರುವ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!

ಸಿಲಿಂಡರ್​​ಗಳಿಗಾಗಿ ಜನ ಕ್ಯೂ ನಿಲ್ಲುತ್ತಿರುವ ನಡುವೆ ಅಚ್ಚರಿ ಹೇಳಿಕೆ ಕೊಟ್ಟ ಸಚಿವ ಮುನಿಯಪ್ಪ!

ಬಸವರಾಜ್​ ದೊಡ್ಡಮನಿ, ದಾವಣಗೆರೆ
| Edited By: |

Updated on: Apr 01, 2026 | 12:33 PM

Share

ದಾವಣಗೆರೆಯಲ್ಲಿ ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ಅವರು ರಾಜ್ಯದಲ್ಲಿ ಎಲ್​ಪಿಜಿ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್‌ಗಳು ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಖಾಸಗಿ ಏಜೆನ್ಸಿಗಳು ಹೆಚ್ಚು ದರ ವಿಧಿಸುತ್ತಿರುವುದರಿಂದ ಗೊಂದಲ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರವು ದರ ನಿಯಂತ್ರಣಕ್ಕೆ ಕ್ರಮ ತೆಗೆದುಕೊಳ್ಳಬೇಕೆಂದು ಸಚಿವರು ಮನವಿ ಮಾಡಿದ್ದಾರೆ.

ದಾವಣಗೆರೆ, ಏಪ್ರಿಲ್​​ 01: ಆಹಾರ ಸಚಿವ ಕೆ.ಹೆಚ್​. ಮುನಿಯಪ್ಪ ರಾಜ್ಯದಲ್ಲಿ ಎಲ್​ಪಿಜಿ ಸಿಲಿಂಡರ್‌ಗಳ ಅಭಾವವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಅನಗತ್ಯವಾಗಿ ಗ್ರಾಹಕರು ಕ್ಯೂ ನಿಲ್ಲುವ ಅಗತ್ಯವಿಲ್ಲ, ಏಕೆಂದರೆ ಬೇಕಾದಷ್ಟು ಎಲ್​ಪಿಜಿ ಸಿಲಿಂಡರ್‌ಗಳು ಲಭ್ಯವಿವೆ ಎಂದು ಅವರು ತಿಳಿಸಿದ್ದಾರೆ. ವಿಶೇಷವಾಗಿ ಎಲ್​ಪಿಜಿ ಆಟೋರಿಕ್ಷಾಗಳಿಗೆ ಪ್ರತಿದಿನ 3000 ಸಿಲಿಂಡರ್‌ಗಳು ಖರ್ಚಾಗುತ್ತಿದ್ದು, ಇಂಡಿಯನ್ ಆಯಿಲ್ ಕಾರ್ಪೊರೇಷನ್, ಬಿಪಿಎಲ್ ಮತ್ತು ಎಚ್‌ಪಿಸಿಎಲ್ ಕಂಪನಿಗಳಿಂದ ಸಮರ್ಪಕವಾಗಿ ಪೂರೈಕೆಯಾಗುತ್ತಿವೆ. ಎಲ್ಲಿಯೂ ಯಾವುದೇ ಕೊರತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ. ಖಾಸಗಿ ಗ್ಯಾಸ್ ಏಜೆನ್ಸಿಗಳು ಗೊಂದಲಕ್ಕೆ ಕಾರಣವಾಗಿದ್ದು, ಅವು ಎಲ್​ಪಿಜಿ ದರವನ್ನು ಹೆಚ್ಚಿಸಿವೆ. ಈ ಸಂಬಂಧ ಪೆಟ್ರೋಲಿಯಂ ಸಚಿವರಿಗೆ ಮನವಿ ಮಾಡಿದ್ದು, ಖಾಸಗಿಯವರೂ ಸಹ ಸರ್ಕಾರ ನಿಗದಿಪಡಿಸಿದ ದರದಲ್ಲೇ ಎಲ್​ಪಿಜಿ ಪೂರೈಸಬೇಕು ಎಂದು ಮುನಿಯಪ್ಪ ಒತ್ತಾಯಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Follow Us