ಯಾದಗಿರಿ: ನಿರ್ವಹಣೆ ಕಾರ್ಯ ಕಾಣದ ಬಸವಸಾಗರ ಜಲಾಶಯ ಅಪಾಯಕ್ಕೀಡಾದರೆ ಹೊಣೆ ಯಾರು?

Updated on: Aug 21, 2024 | 10:37 AM

ಜಿಲ್ಲೆಯ ಶಾಸಕರಲ್ಲಿ ಒಬ್ಬರಾಗಿರುವ ಶರಣಬಸಪ್ಪ ದರ್ಶನಾಪುರ ಸಿದ್ದರಾಮಯ್ಯ ಸಂಪುಟದಲ್ಲಿ ಸಚಿವರೂ ಆಗಿದ್ದಾರೆ. ಯಾದಗಿರಿಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಪಿಎಸ್ಐ ಪರಶುರಾಮ್ ಸಾವಿನ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದಾರೆ. ಸಚಿವ ದರ್ಶನಾಪುರ ಒಮ್ಮೆ ಜಲಾಶಯಕ್ಕೆ ಭೇಟಿ ನೀಡಿ ಗೇಟ್ ಗಳನ್ನು ಪರಿಶೀಲಿಸಲಾಗದಷ್ಟು ಬ್ಯೂಸಿಯೇ?

ಯಾದಗಿರಿ: ಜಿಲ್ಲೆಯಿಂದ ವಿಧಾನ ಸಭೆಗೆ ಅಯ್ಕೆಯಾಗಿರುವ ಶಾಸಕರ ಬೇಜವಾಬ್ದಾರಿತನ, ಒಣಪ್ರತಿಷ್ಠೆ ಮತ್ತು ಉಡಾಫೆ ಮನೋಭಾವದಿಂದಾಗಿ ಟಿಬಿ ಡ್ಯಾಂನಲ್ಲಿ ಆದಂಥ ಅನಾಹುತ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರದಲ್ಲಿರುವ ಬಸವಸಾಗರ ಜಲಾಶಯಕ್ಕೂ ಎದುರಾದರೆ ಅಚ್ಚರಿಪಡಬೇಕಿಲ್ಲ. ನಮ್ಮ ಯಾದಗಿರಿ ವರದಿಗಾರ ನೀಡುವ ಮಾಹಿತಿ ಪ್ರಕಾರ ಕಳೆದ ಎರಡು ವರ್ಷಗಳಿಂದ ಜಲಾಶಯ ನಿರ್ವಹಣೆ ಕೆಲಸ ನಡೆದಿಲ್ಲ. ಸ್ಥಳೀಯ ನೀರಾವರಿ ತಜ್ಞ ರಾಘವೇಂದ್ರ ಹೇಳುವ ಹಾಗೆ ವೈರ್ ರೂಫಿಂಗ್ ಮತ್ತು ಜಲಾಶಯದ ಗೇಟ್ ಗಳಿಗೆ ಗ್ರೀಸಿಂಗ್ ಮಾಡುವ ಕೆಲಸ ಕಾಲಕಾಲಕ್ಕೆ ಆಗುತ್ತಿರಬೇಕಾಗುತ್ತದೆ. ಅದರೆ ಶಾಸಕರ ಒಣ ಪ್ರತಿಷ್ಠೆಯ ಕಾರಣ ನಿರ್ವಹಣೆಗಾಗಿ ಕರೆಯಲಾಗಿದ್ದ ಟೆಂಡರ್ ರದ್ದಾಗಿದೆ. ಜಲಾಶಯದ ನಿರ್ವಹಣೆಗಾಗಿ ಸರ್ಕಾರ ₹ 63 ಲಕ್ಷ ಪ್ರತಿವರ್ಷ ಬಿಡುಗಡೆ ಮಾಡುತ್ತದೆ, ಆದರೆ ಈ ಭಾಗದ ಶಾಸಕರ ನಡುವಿನ ತಿಕ್ಕಾಟದಿಂದ ಹಣದ ಸದುಪಯೋಗ ಆಗುತ್ತಿಲ್ಲ. ಮಹಾರಾಷ್ಟ್ರದಲ್ಲಿ ಮಳೆ ಮುಂದುವರಿದು ಜಲಾಶಯಕ್ಕೆ ನೀರು ಹರಿದು ಬಂದರೆ ಹೆಚ್ಚುವರಿ ನೀರನ್ನು ಕೃಷ್ಣ ನದಿಗೆ ಹರಿಬಿಡಬೇಕಾಗುತ್ತದೆ. ಆ ಸಂದರ್ಭದಲ್ಲಿ ಕ್ರೆಸ್ಟ್ ಗಳನ್ನು ಓಪನ್ ಮಾಡಿದಾಗ ಏನಾದರೂ ಹೆಚ್ಚುಕಡಿಮೆಯಾದರೆ ಶಾಸಕರೆಲ್ಲ ಹೊಣೆ ಹೊತ್ತಾರೆಯೇ?

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಟಿಬಿ ಡ್ಯಾಂ ಗೇಟ್​ ದುರಸ್ತಿ ಕಾರ್ಯ ಯಶಸ್ವಿ: ಸಿಬ್ಬಂದಿಗಳಿಗೆ ಧನ್ಯವಾದ ತಿಳಿಸಿದ ಡಿಕೆ ಶಿವಕುಮಾರ್

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More