Sign In

By signing in or creating an account, you agree with Associated Broadcasting Company's Terms & Conditions and Privacy Policy.

BSY reacts; ಅಕ್ಕಿ ಹೊಂದಿಸಲು ಕಾಂಗ್ರೆಸ್ ಸರ್ಕಾರ ಏನಾದರೂ ಮಾಡಲಿ, ಅನ್ನಭಾಗ್ಯ ಸ್ಕೀಮ್ ಜಾರಿಗೊಳ್ಳಲೇಬೇಕು: ಬಿಎಸ್ ಯಡಿಯೂರಪ್ಪ

BSY reacts; ಅಕ್ಕಿ ಹೊಂದಿಸಲು ಕಾಂಗ್ರೆಸ್ ಸರ್ಕಾರ ಏನಾದರೂ ಮಾಡಲಿ, ಅನ್ನಭಾಗ್ಯ ಸ್ಕೀಮ್ ಜಾರಿಗೊಳ್ಳಲೇಬೇಕು: ಬಿಎಸ್ ಯಡಿಯೂರಪ್ಪ

ಅರುಣ್​ ಕುಮಾರ್​ ಬೆಳ್ಳಿ
|

Updated on: Jun 19, 2023 | 10:22 AM

ಪ್ರಸ್ತುತವಾಗಿ ಜನರಿಗೆ ಪ್ರತಿ ತಿಂಗಳು ಸಿಗುತ್ತಿರುವ 5 ಕೆಜಿ ಅಕ್ಕಿ ಪ್ರಧಾನಿಯವರೇ ನೀಡುತ್ತಿದ್ದಾರೆ, ಎಂದು ಯಡಿಯೂರಪ್ಪ ಹೇಳಿದರು.

ಶಿವಮೊಗ್ಗ: ಅನ್ನಭಾಗ್ಯ ಯೋಜನೆ ಜಾರಿಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಗೊಂದಲ ಉಂಟುಮಾಡುವ ಪ್ರಯತ್ನ ಮಾಡುತ್ತಿದೆ ಎಂದು ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ (BS Yediyurappa) ಹೇಳಿದರು. ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಮಾಜಿ ಮುಖ್ಯಮಂತ್ರಿ, ಅಕ್ಕಿ ನೀಡುವ ಗ್ಯಾರಂಟಿ ಘೋಷಿಸುವಾಗ ಸಿದ್ದರಾಮಯ್ಯ (Siddaramaiah) ಮತ್ತು ಡಿಕೆ ಶಿವಕುಮಾರ್ (DK Shivakumar) ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಕ್ಕಿ ನೀಡುವುದಾಗಿ ಹೇಳಿರಲಿಲ್ಲ. ಪ್ರಸ್ತುತವಾಗಿ ಜನರಿಗೆ ಪ್ರತಿ ತಿಂಗಳು ಸಿಗುತ್ತಿರುವ 5 ಕೆಜಿ ಅಕ್ಕಿ ಪ್ರಧಾನಿಯವರೇ ನೀಡುತ್ತಿದ್ದಾರೆ. ಜನತೆಗೆ ನೀಡಿದ ಭರವಸೆಯನ್ನು ಉಳಿಸಿಕೊಳ್ಳುವುದು ಕಾಂಗ್ರೆಸ್ ಸರ್ಕಾರದ ಹೊಣೆಗಾರಿಕೆಯಾಗಿದೆ. ಅಕ್ಕಿ ಖರೀದಿ ಮಾಡಿಯಾದರೂ ತರಲಿ ಅಥವಾ ಏನಾದರೂ ಮಾಡಲಿ, ಅನ್ನಭಾಗ್ಯ ಯೋಜನೆಯನ್ನು ಅವರು ಜಾರಿಗೊಳಿಸಲೇಬೇಕು ಎಂದು ಯಡಿಯೂರಪ್ಪ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಕಿಸಿ