AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಸ್ರೇಲ್​ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ, ಭಾರತ ಸರ್ಕಾರ ಅವರನ್ನು ವಾಪಸ್ಸು ಕರೆತರುವ ವ್ಯವಸ್ಥೆ ಮಾಡಿದೆ: ಇಸ್ರೇಲಿಂದ ವಾಪಸ್ಸಾದ ಕನ್ನಡಿಗ

ಇಸ್ರೇಲ್​ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ, ಭಾರತ ಸರ್ಕಾರ ಅವರನ್ನು ವಾಪಸ್ಸು ಕರೆತರುವ ವ್ಯವಸ್ಥೆ ಮಾಡಿದೆ: ಇಸ್ರೇಲಿಂದ ವಾಪಸ್ಸಾದ ಕನ್ನಡಿಗ

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Oct 13, 2023 | 10:58 AM

Share

ಕನ್ನಡಿಗರು ಇಸ್ರೇಲ್ ನ ಯಾವ್ಯಾವ ಭಾಗದಲ್ಲಿದ್ದಾರೆ ಎನ್ನುವ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಹೇಳುವ ಅವರು ಭಾರತೀಯರ ಸುರಕ್ಷತೆ ವಿಷಯದಲ್ಲಿ ಗಾಬರಿಯಾಗಬೇಕಿಲ್ಲ, ಅವರನ್ನು ವಾಪಸ್ಸು ಕರೆತರುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ ಎಂದರು. ಜಯೇಷ್, ಗಾಜಾ ಬಾರ್ಡರ್ ನಿಂದ ಸುಮಾರು 70-75 ಕಿಮೀ ದೂರದ ಅರಿಯಲ್ ಎಂಬ ಪ್ರದೇಶದಲ್ಲಿ ವಾಸವಾಗಿದ್ದರಂತೆ.

ದೆಹಲಿ: ಆಪರೇಶನ್ ಅಜಯ್ (Operation Ajay) ಭಾಗವಾಗಿ ಭಾರತೀಯ ವಾಯುಸೇನೆಯ ವಿಮಾನವು ಇಸ್ರೇಲ್ ನಲ್ಲಿದ್ದ ಭಾರತೀಯರನ್ನು ವಾಪಸ್ಸು ಕರೆತರುವ ಕಾರ್ಯಾಚರಣೆ ಆರಂಭವಾಗಿದ್ದು ಮೊದಲ ಬ್ಯಾಚ್ ನಲ್ಲಿ 212 ಜನ ತಾಯ್ನಾಡಿಗೆ (homeland) ವಾಪಸ್ಸಾಗಿದ್ದಾರೆ. ದೆಹಲಿಯಲ್ಲಿ ಬಂದಿಳಿದವರ ಪೈಕಿ ಐವರು ಕನ್ನಡಿಗರಾಗಿದ್ದು (Kannadigas) ಜಯೇಷ್ (Jayesh) ಎನ್ನುವವರು ಟಿವಿ9 ಕನ್ನಡ ವಾಹಿನಿಯ ದೆಹಲಿ ಪ್ರತಿನಿಧಿಯೊಂದಿಗೆ ಮಾತಾಡಿದ್ದರು. ಜಯೇಷ್ ಹೇಳುವ ಪ್ರಕಾರ ಇಸ್ರೇಲ್ ನಲ್ಲಿರುವ ಭಾರತೀಯರಿಗೆ ಆತಂಕಪಡುವ ಸ್ಥಿತಿಯೇನೂ ಇಲ್ಲ, ಅವರೆಲ್ಲ ಸುರಕ್ಷಿತವಾಗಿದ್ದಾರೆ. ಕನ್ನಡಿಗರು ಇಸ್ರೇಲ್ ನ ಯಾವ್ಯಾವ ಭಾಗದಲ್ಲಿದ್ದಾರೆ ಎನ್ನುವ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಹೇಳುವ ಅವರು ಭಾರತೀಯರ ಸುರಕ್ಷತೆ ವಿಷಯದಲ್ಲಿ ಗಾಬರಿಯಾಗಬೇಕಿಲ್ಲ, ಅವರನ್ನು ವಾಪಸ್ಸು ಕರೆತರುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ ಎಂದರು. ಜಯೇಷ್, ಗಾಜಾ ಬಾರ್ಡರ್ ನಿಂದ ಸುಮಾರು 70-75 ಕಿಮೀ ದೂರದ ಅರಿಯಲ್ ಎಂಬ ಪ್ರದೇಶದಲ್ಲಿ ವಾಸವಾಗಿದ್ದರಂತೆ. ಇಸ್ರೇಲ್ ನಲ್ಲಿ ಪರಿಸ್ಥಿತಿ ಸಾಮಾನ್ಯಗೊಂಡ ಬಳಿಕ ವಾಪಸ್ಸು ಹೋಗುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.