ಇಸ್ರೇಲ್​ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ, ಭಾರತ ಸರ್ಕಾರ ಅವರನ್ನು ವಾಪಸ್ಸು ಕರೆತರುವ ವ್ಯವಸ್ಥೆ ಮಾಡಿದೆ: ಇಸ್ರೇಲಿಂದ ವಾಪಸ್ಸಾದ ಕನ್ನಡಿಗ

ಕನ್ನಡಿಗರು ಇಸ್ರೇಲ್ ನ ಯಾವ್ಯಾವ ಭಾಗದಲ್ಲಿದ್ದಾರೆ ಎನ್ನುವ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಹೇಳುವ ಅವರು ಭಾರತೀಯರ ಸುರಕ್ಷತೆ ವಿಷಯದಲ್ಲಿ ಗಾಬರಿಯಾಗಬೇಕಿಲ್ಲ, ಅವರನ್ನು ವಾಪಸ್ಸು ಕರೆತರುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ ಎಂದರು. ಜಯೇಷ್, ಗಾಜಾ ಬಾರ್ಡರ್ ನಿಂದ ಸುಮಾರು 70-75 ಕಿಮೀ ದೂರದ ಅರಿಯಲ್ ಎಂಬ ಪ್ರದೇಶದಲ್ಲಿ ವಾಸವಾಗಿದ್ದರಂತೆ.

ಇಸ್ರೇಲ್​ನಲ್ಲಿರುವ ಭಾರತೀಯರು ಸುರಕ್ಷಿತವಾಗಿದ್ದಾರೆ, ಭಾರತ ಸರ್ಕಾರ ಅವರನ್ನು ವಾಪಸ್ಸು ಕರೆತರುವ ವ್ಯವಸ್ಥೆ ಮಾಡಿದೆ: ಇಸ್ರೇಲಿಂದ ವಾಪಸ್ಸಾದ ಕನ್ನಡಿಗ
|

Updated on: Oct 13, 2023 | 10:58 AM

ದೆಹಲಿ: ಆಪರೇಶನ್ ಅಜಯ್ (Operation Ajay) ಭಾಗವಾಗಿ ಭಾರತೀಯ ವಾಯುಸೇನೆಯ ವಿಮಾನವು ಇಸ್ರೇಲ್ ನಲ್ಲಿದ್ದ ಭಾರತೀಯರನ್ನು ವಾಪಸ್ಸು ಕರೆತರುವ ಕಾರ್ಯಾಚರಣೆ ಆರಂಭವಾಗಿದ್ದು ಮೊದಲ ಬ್ಯಾಚ್ ನಲ್ಲಿ 212 ಜನ ತಾಯ್ನಾಡಿಗೆ (homeland) ವಾಪಸ್ಸಾಗಿದ್ದಾರೆ. ದೆಹಲಿಯಲ್ಲಿ ಬಂದಿಳಿದವರ ಪೈಕಿ ಐವರು ಕನ್ನಡಿಗರಾಗಿದ್ದು (Kannadigas) ಜಯೇಷ್ (Jayesh) ಎನ್ನುವವರು ಟಿವಿ9 ಕನ್ನಡ ವಾಹಿನಿಯ ದೆಹಲಿ ಪ್ರತಿನಿಧಿಯೊಂದಿಗೆ ಮಾತಾಡಿದ್ದರು. ಜಯೇಷ್ ಹೇಳುವ ಪ್ರಕಾರ ಇಸ್ರೇಲ್ ನಲ್ಲಿರುವ ಭಾರತೀಯರಿಗೆ ಆತಂಕಪಡುವ ಸ್ಥಿತಿಯೇನೂ ಇಲ್ಲ, ಅವರೆಲ್ಲ ಸುರಕ್ಷಿತವಾಗಿದ್ದಾರೆ. ಕನ್ನಡಿಗರು ಇಸ್ರೇಲ್ ನ ಯಾವ್ಯಾವ ಭಾಗದಲ್ಲಿದ್ದಾರೆ ಎನ್ನುವ ಬಗ್ಗೆ ತನಗೆ ಮಾಹಿತಿ ಇಲ್ಲವೆಂದು ಹೇಳುವ ಅವರು ಭಾರತೀಯರ ಸುರಕ್ಷತೆ ವಿಷಯದಲ್ಲಿ ಗಾಬರಿಯಾಗಬೇಕಿಲ್ಲ, ಅವರನ್ನು ವಾಪಸ್ಸು ಕರೆತರುವ ಕೆಲಸವನ್ನು ಭಾರತ ಸರ್ಕಾರ ಮಾಡುತ್ತಿದೆ ಎಂದರು. ಜಯೇಷ್, ಗಾಜಾ ಬಾರ್ಡರ್ ನಿಂದ ಸುಮಾರು 70-75 ಕಿಮೀ ದೂರದ ಅರಿಯಲ್ ಎಂಬ ಪ್ರದೇಶದಲ್ಲಿ ವಾಸವಾಗಿದ್ದರಂತೆ. ಇಸ್ರೇಲ್ ನಲ್ಲಿ ಪರಿಸ್ಥಿತಿ ಸಾಮಾನ್ಯಗೊಂಡ ಬಳಿಕ ವಾಪಸ್ಸು ಹೋಗುವುದಾಗಿ ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?