ಬೆಳಗಾವಿಯಲ್ಲಿ ಆರ್‌ಎಸ್‌ಎಸ್‌ ವಾರ್ಷಿಕ ಸಭೆ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಮಾತು

Updated on: Jul 08, 2026 | 12:28 PM

ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯಿಸಿದ್ದು, ಕಾರ್ಯಕ್ರಮ ಬೇಕಿದ್ರೆ ನಡೆಸಿಕೊಳ್ಳಲಿ. ಆದ್ರೆ, ಬೀದಿಗಿಳಿದು ಪರೇಡ್​ಗೆ ಅವಕಾಶ ಇಲ್ಲ ಎಂದ ಖಡಕ್ ಆಗಿ ಹೇಳಿದ್ದಾರೆ. ಈಗಾಗಲೇ ನಾನು ಗೃಹ ಸಚಿವನಾಗಿ ಇರುವ ತನಕ ಆರ್​​ಎಸ್​​ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ಚರ್ಚೆಯಾಗುತ್ತಿದ್ದು, ಇದರ ಮಧ್ಯೆ ಇದೀಗ ಬೆಳಗಾವಿ ಕಾರ್ಯಮ ನಡೆಯುವ ಮೊದಲೇ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಬೆಂಗಳೂರು/ಬೆಳಗಾವಿ, (ಜುಲೈ 08): ಇದೇ ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ಬೆಳಗಾವಿಯಲ್ಲಿ (Belagavi) ಆರ್​​ಎಸ್​​ಎಸ್​ (RSS) ಪ್ರಚಾರಕರ ವಾರ್ಷಿಕ ಸಭೆ ನಡೆಯಲಿದ್ದು, ಈ ಸಭೆಯಲ್ಲಿ ಜನಗಣತಿ ಪ್ರಕ್ರಿಯೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಈ ಸಭೆಯಲ್ಲಿ ದೇಶದಾದ್ಯಂತ ಇರುವ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಭಾಗವಹಿಸಲಿದ್ದಾರೆ. ಇನ್ನು ಈ ಬಗ್ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಪ್ರತಿಕ್ರಿಯಿಸಿದ್ದು, ಕಾರ್ಯಕ್ರಮ ಬೇಕಿದ್ರೆ ನಡೆಸಿಕೊಳ್ಳಲಿ. ಆದ್ರೆ, ಬೀದಿಗಿಳಿದು ಪರೇಡ್​ಗೆ ಅವಕಾಶ ಇಲ್ಲ ಎಂದ ಖಡಕ್ ಆಗಿ ಹೇಳಿದ್ದಾರೆ.

ನಾನು ಗೃಹ ಸಚಿವನಾಗಿ ಇರುವ ತನಕ ಆರ್​​ಎಸ್​​ಎಸ್ ಪಥಸಂಚಲನಕ್ಕೆ ಅನುಮತಿ ಕಡ್ಡಾಯ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಇದು ಸಾಮಾಜಿಕ ಜಾಲತಾಣಗಳಲ್ಲಿ ಬಾರೀ ಚರ್ಚೆಯಾಗುತ್ತಿದ್ದು, ಇದರ ಮಧ್ಯೆ ಇದೀಗ ಬೆಳಗಾವಿ ಕಾರ್ಯಕ್ರಮ ಆರಂಭವಾಗುವುದಕ್ಕೂ ಮೊದಲೇ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 08, 2026 12:26 PM
Follow Us