MLA on Budget; ಅಭಿವೃದ್ಧಿ ವಿಷಯದಲ್ಲಿ ತಾರತಮ್ಯವಿಲ್ಲ, ಒಂದು ವಿಷನ್​ನೊಂದಿಗೆ ನಾವು ಸಾಗುತ್ತಿದ್ದೇವೆ: ಪ್ರದೀಪ್ ಈಶ್ವರ್

ಅರುಣ್​ ಕುಮಾರ್​ ಬೆಳ್ಳಿ

Updated on: Jul 08, 2023 | 1:30 PM

ವಿರೋಧ ಪಕ್ಷದವರು ತನ್ನನ್ನು ಬಯ್ಯಲಿ, ತೆಗಳಲಿ ಆದರೆ ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಪ್ರದೀಪ್ ಈಶ್ವರ್ ಹೇಳಿದರು.

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಅತಿ ಹೆಚ್ಚಿನ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬಿಡುಗಡೆ ಮಾಡಿದ್ದಾರೆ, ಎತ್ತಿನಹೊಳೆ ಯೋಜನೆಗೆ ಹಣ, ಶಿಡ್ಲಘಟ್ಟಕ್ಕೆ ರೂ. 75 ಕೋಟಿ ಅನುದಾನ ಮಂಜೂರು ಮಾಡಿದ್ದಾರೆ, ಕಾಂಗ್ರೆಸ್ ಸರ್ಕಾರ ಒಂದು ವಿಷನ್ ಇಟ್ಟುಕೊಂಡು ಮುಂದೆ ಸಾಗುತ್ತಿದೆ, ಎಂದು ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ನಗರದಲ್ಲಿಂದು ಹೇಳಿದರು. ಅಭಿವೃದ್ಧಿ ವಿಷಯ ಬಂದಾಗ ನಮ್ಮ ಸರ್ಕಾರ ತಾರತಮ್ಯ ಮನೋಭಾವ ಪ್ರದರ್ಶಿಸುವುದಿಲ್ಲ, ಹಾಗೆ ಮಾಡಿದ್ದೇಯಾದರೆ, ಶಿಡ್ಲಘಟ್ಟದಿಂದ ಕಾಂಗ್ರೆಸ್ ಪಕ್ಷದ ಶಾಸಕ ಆಯ್ಕೆಯಾಗಿರದಿದ್ದರೂ ಅನುದಾನ ಬಿಡುಗಡೆ ಮಾಡಲಾಗಿದೆ, ಇದರ ಹಿಂದಿನ ಉದ್ದೇಶ ಒಂದೇ-ಅಲ್ಲಿ ಒಂದು ರೇಷ್ಮೆ ಮಾರ್ಕೆಟ್ ಅಭಿವೃದ್ಧಿಗೊಂಡರೆ ಭಾಗದ ರೇಷ್ಮೆ ಬೆಳೆಗಾರರಿಗೆ (sericulture farmers) ಬಹಳ ಅನುಕೂಲವಾಗುತ್ತದೆ ಎಂದು ಶಾಸಕ ಹೇಳಿದರು. ವಿರೋಧ ಪಕ್ಷದವರು ತನ್ನನ್ನು ಬಯ್ಯಲಿ, ತೆಗಳಲಿ ಆದರೆ ಅಭಿವೃದ್ಧಿ ವಿಷಯದಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಪ್ರದೀಪ್ ಈಶ್ವರ್ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.