AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ

ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿದ್ದರಾಮಯ್ಯ

ರಮೇಶ್ ಬಿ. ಜವಳಗೇರಾ
|

Updated on:Feb 01, 2026 | 6:45 PM

Share

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಕರ್ನಾಟಕಕ್ಕೆ ಬಜೆಟ್​ನಲ್ಲಿ ಏನೂ ಕೊಟ್ಟಿಲ್ಲ. ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.

ಕಲಬುರಗಿ, (ಫೆಬ್ರವರಿ 01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  (Nirmala Sitharaman) ಅವರು ಇಂದು (ಫೆಬ್ರವರಿ 01) 2026-27ನೇ ಸಾಲಿನ ಬಜೆಟ್ (Union Budget 2026) ಮಂಡಿಸಿದ್ದಾರೆ. 53.47 ಲಕ್ಷ ಕೋಟಿ ರೂಪಾಯಿ ಮೌಲ್ಯದ ಈ ಬಜೆಟ್‌ ಮಂಡಿಸಿದ್ದಾರೆ. ಇನ್ನು ಈ ಬಗ್ಗೆ ಕರ್ನಾಟಕ ಸಿಎಂ ಸಿದ್ದರಾಮಯ್ಯ (Siddaramaiah) ಪ್ರತಿಕ್ರಿಯಿಸಿದ್ದು, ಕರ್ನಾಟಕಕ್ಕೆ ಬಜೆಟ್​ನಲ್ಲಿ ಏನೂ ಕೊಟ್ಟಿಲ್ಲ. ಕರ್ನಾಟಕ್ಕೆ ಕೇಂದ್ರ ಸರ್ಕಾರ ಚೊಂಬು ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ.

ಕಲಬುರಗಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ, ಕೇಂದ್ರ ಸರ್ಕಾರದ ಬಜೆಟ್ ನಿರಾಶಾದಾಯಕವಾಗಿದೆ. ಯಾವುದೇ ದೂರದೃಷ್ಟಿಯಿಲ್ಲದ ಬಜೆಟ್ ಇದು.ಇಂದು ಮಂಡಿಸಿರುವ ಬಜೆಟ್​ ಬರೀ ಹೇಳಿಕೆಗಳಿಂದ ಕೂಡಿದೆ.ಪರಿಷ್ಕೃತ ಅಂದಾಜು ಗಾತ್ರ 49 ಲಕ್ಷ 64 ಸಾವಿರ ಕೋಟಿ. ಒಂದು ಲಕ್ಷ ಕೋಟಿಯಷ್ಟು ಪರಿಷ್ಕೃತ ಅಂದಾಜು ಕಡಿಮೆ. ಬೆಂಗಳೂರು-ಹೈದರಾಬಾದ್​​ ಹೈಸ್ಪೀಡ್​​ ರೈಲು ಘೋಷಣೆ ಮಾಡಿದ್ದಾರೆ. ಇದರಿಂದ ಕರ್ನಾಟಕಕ್ಕೆ ಏನು ಅನುಕೂಲ. ಮುಂದಿನ 5 ವರ್ಷಗಳಿಂದ ಯೋಜನೆ ಎಂದು ಹೇಳಿದ್ದಾರೆ ಅಷ್ಟೇ. ನಮಗೆ ಬೇಕಿರುವುದು ಬೆಂಗಳೂರು-ಮುಂಬೈ ಹೈಸ್ಪೀಡ್​ ರೈಲು. ಬೆಂಗಳೂರು-ಮಂಗಳೂರಿಗೆ ಹೈಸ್ಪೀಡ್​ ಬೇಕು. ಕೇಂದ್ರದವರು ವಿಕಸಿತ ಭಾರತ ಬಗ್ಗೆ ಬಹಳ ಮಾತನಾಡಿದ್ರು. ಆದರೆ ಅದು ಬರೀ ಮಾತಿನಲ್ಲಿದೆ, ಕೃತಿಯಾಗಿ ಅವರು ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

Published on: Feb 01, 2026 06:44 PM