ವಿಶ್ವಾಸವಿರುವ ಕಾರಣಕ್ಕೆ ಸುಮಲತಾ ಬೆಂಗಳೂರಿಂದ ಮಂಡ್ಯ ಬಂದು ನನಗೆ ವೋಟು ನೀಡಿದ್ದಾರೆ: ಹೆಚ್ ಡಿ ಕುಮಾರಸ್ವಾಮಿ

ಅರುಣ್​ ಕುಮಾರ್​ ಬೆಳ್ಳಿ

Updated on: Apr 26, 2024 | 3:57 PM

ದೇವೇಗೌಡರು ಯಾಕೆ ಹಾಗೆ ಹೇಳಿದರೋ ಗೊತ್ತಿಲ್ಲ, ಅವರಿಗೆ ಮಾಹಿತಿ ಕೊರತೆ ಇರಬಹುದು, ಸುಮಲತಾ ಅವರ ಸಹಕಾರ ಕೇಳಲೆಂದೇ ತಾನು ಅವರ ಮನೆಗೆ ಹೋಗಿದ್ದೆ, ಪ್ರಧಾನ ಮಂತ್ರಿಯವರ ಮೈಸೂರು ಸಭೆಯಲ್ಲಿ ತಾನು ಮತ್ತು ಅವರು ವೇದಿಕೆಯ ಮೇಲಿದ್ದೆವು ಮತ್ತು ಅಲ್ಲೇ ಅವರಿಗೆ ಒಂದೆರಡು ದಿನಗಳ ಮಟ್ಟಿಗೆ ಪ್ರಚಾರಕ್ಕೆ ಬನ್ನಿ ಎಂದು ಮನವಿ ಮಾಡಿದ್ದೆ ಎಂದು ಕುಮಾರಸ್ವಾಮಿ ಹೇಳಿದರು.

ಮಂಡ್ಯ: ಬೆಳಗ್ಗೆ ರಾಮನಗರದಲ್ಲಿದ್ದ ಹೆಚ್ ಡಿ ಕುಮಾರಸ್ವಾಮಿ (HD Kumaraswamy) ನಂತರ ಮಂಡ್ಯಗೆ ತೆರಳಿ ಅಲ್ಲಿ ನಡೆಯುತ್ತಿದ್ದ ಮತದಾನ ವೀಕ್ಷಿಸಿದರು. ಇದೇ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ಮಂಡ್ಯದಲ್ಲಿ ತನಗೆ ಈ ಸಲ ಅಭೂತಪೂರ್ವ ಬೆಂಬಲ ಸಿಕ್ಕಿದೆ, ಎಲ್ಲ ಧರ್ಮ, ಸುಮುದಾಯಗಳ (all communities) ಜನ ತನ್ನ ಪರ ವೋಟು ಮಾಡುತ್ತಿದ್ದಾರೆ, ಕೆಲ ಕಾಂಗ್ರೆಸ್ ಕಾರ್ಯಕರ್ತರು ಮುಖಂಡರು ಸಹ ತನಗೆ ಫೋನ್ ಮಾಡಿ ಬೆಂಬಲ ಸೂಚಿಸಿದ್ದಾರೆ ಮತ್ತು ಮತ ನೀಡುವ ಭರವಸೆ ನೀಡಿದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ನಾಯಕರು ತನ್ನನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ, ದೇವೇಗೌಡರು ತನ್ನ ಅವಶ್ಯಕತೆ ಇಲ್ಲ ಅನ್ನುವ ಹಾಗೆ ಮಾತಾಡಿದರು ಎಂದ ಸುಮಲತಾ ಅಂಬರೀಶ್ (Sumalatha Ambareesh) ಹೇಳಿರುವುದನ್ನು ಕುಮಾರಸ್ವಾಮಿ ಗಮನಕ್ಕೆ ತಂದಾಗ ಉತ್ತರಿಸಲು ತಡವರಿಸಿದರು.

ದೇವೇಗೌಡರು ಯಾಕೆ ಹಾಗೆ ಹೇಳಿದರೋ ಗೊತ್ತಿಲ್ಲ, ಅವರಿಗೆ ಮಾಹಿತಿ ಕೊರತೆ ಇರಬಹುದು, ಸುಮಲತಾ ಅವರ ಸಹಕಾರ ಕೇಳಲೆಂದೇ ತಾನು ಅವರ ಮನೆಗೆ ಹೋಗಿದ್ದೆ, ಪ್ರಧಾನ ಮಂತ್ರಿಯವರ ಮೈಸೂರು ಸಭೆಯಲ್ಲಿ ತಾನು ಮತ್ತು ಅವರು ವೇದಿಕೆಯ ಮೇಲಿದ್ದೆವು ಮತ್ತು ಅಲ್ಲೇ ಅವರಿಗೆ ಒಂದೆರಡು ದಿನಗಳ ಮಟ್ಟಿಗೆ ಪ್ರಚಾರಕ್ಕೆ ಬನ್ನಿ ಎಂದು ಮನವಿ ಮಾಡಿದ್ದೆ ಎಂದು ಕುಮಾರಸ್ವಾಮಿ ಹೇಳಿದರು.

ಮುಂದುವರಿದು ಅವರು ಹೇಳಿದ ಮಾತು ಸಾಮಾನ್ಯ ಗ್ರಹಿಕೆಗೆ ದೂರವಾಗಿತ್ತು. ಅವರಿಗೆ ತನ್ನ ಮೇಲೆ ವಿಶ್ವಾಸವಿರುವ ಕಾರಣಕ್ಕೆ ಬೆಂಗಳೂರಿಂದ ಮಂಡ್ಯಗೆ ಬಂದು ಮತ ಚಲಾಯಿಸಿದ್ದಾರೆ, ಅವರು ಖಂಡಿತವಾಗಿಯೂ ತನಗೆ ವೋಟು ನೀಡಿರುತ್ತಾರೆ ಎಂದು ಕುಮಾರಸ್ವಾಮಿ ಹೇಳಿದರು!

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ಮಂಡ್ಯ ಜಿಲ್ಲೆಗೆ ತನ್ನ ಕೊಡುಗೆ ಏನು ಎಂದು ಕೇಳಿದ ಕಾಂಗ್ರೆಸ್ ನಾಯಕರಿಗೆ ಉತ್ತರ ನೀಡಿದ ಹೆಚ್ ಡಿ ಕುಮಾರಸ್ವಾಮಿ 

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.