ಬೆಳ್ಳಿಗದೆ ವಿಚಾರ ಸುಳ್ಳು, ಮಂಜುಳಾ ಪಾಟೀಲ್ ಅವರಿಗೆ ಸಹಾಯ ಮಾಡಲು ಮುಂದಾಗಿದ್ದೆ: ವಿನಯ್ ಕುಲಕರ್ಣಿ

Updated on: Apr 25, 2025 | 12:41 PM

ಐಶ್ವರ್ಯ ಗೌಡ ಜನರಿಗೆ ಮೋಸ ವಂಚನೆ ಮಾಡಿದ್ದರೆ ಅದು ಖಂಡಿತ ತಪ್ಪು ಸಮಾಜ ಅಂಥದನ್ನೆಲ್ಲ ಸಹಿಸಿಕೊಳ್ಳೋದಿಲ್ಲ, ಮೋಸ ಮಾಡುವ ಕೆಲಸವನ್ನು ಯಾರೂ ಮಾಡಬಾರದು, ತನ್ನ ವಿರುದ್ಧ ದೂರು ದಾಖಲಾಗಿದ್ದು ನಿಜ, ತನಿಖಾಧಿಕಾರಿಗಳಯ ತನ್ನ ಮನೆಗೆ ಬಂದು ತಪಾಸಣೆ ಮಾಡಿದ್ದಾರೆ, ಅವರಿಗೆ ಯಾವ ದಾಖಲಾತಿಗಳು ಮನೆಯಲ್ಲಿ ಸಿಕ್ಕಿಲ್ಲ ಎಂದು ವಿನಯ್ ಕುಲಕರ್ಣಿ ಹೇಳಿದರು.

ಬೆಂಗಳೂರು, ಏಪ್ರಿಲ್ 25: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ, ವಂಚನೆ ಪ್ರಕರಣದಲ್ಲಿ ಸಿಲುಕಿರುವ ಐಶ್ವರ್ಯ ಗೌಡಗೆ (Aishwarya Gowda) ತಾನು ಯಾವ ಸಹಾಯವೂ ಮಾಡಿಲ್ಲ ಎಂದು ಹೇಳಿದರು. ಆದರೆ ಮಂಜುಳಾ ಪಾಟೀಲ್ ಹೆಸರಿನ ಮಹಿಳೆಯೊಬ್ಬರಿಗೆ ಸಹಾಯ ಮಾಡುವಂತೆ ಕೆಲ ಸಚಿವರು ಫೋನ್ ಮಾಡಿ ಹೇಳಿದಾಗ ತಾನು ಅದಕ್ಕೆ ಮುಂದಾಗಿದ್ದು ನಿಜ ಎಂದು ಹೇಳಿದರು. ಅವರು ತನಗೆ ಬೆಳ್ಳಿಗದೆಯನ್ನು ನೀಡಿಲ್ಲ, ಹುಟ್ಟುಹಬ್ಬದ ಸಂದರ್ಭದಲ್ಲಿ ಯಾವುದೋ ಗಿಫ್ಟ್ ನೀಡಿದ್ದರು, ಆ ಫೋಟೋ ತನ್ನಲ್ಲಿದೆ ಎಂದು ಕುಲಕರ್ಣಿ ಹೇಳಿದರು.

ಇದನ್ನೂ ಓದಿ:  ಬಡ ವಾಹನ ಸವಾರರಿಂದ ಹಣ ವಸೂಲಿ ಮಾಡೋದನ್ನೇ ಪೊಲೀಸರು ಕಾಯಕ ಮಾಡಿಕೊಂಡಿದ್ದಾರೆ: ವಿನಯ್ ಕುಲಕರ್ಣಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More