ಬೆಂಗಳೂರು: ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿರುವ ಕುರುಡುಮಲೆ ಪುಣ್ಯಕ್ಷೇತ್ರಕ್ಕೆ ಭೇಟಿ ನೀಡಿದ ಬಳಿಕ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಬಿಜೆಪಿ ನಿಯೋಜಿತ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಪಕ್ಷದ ಹಿರಿಯ ನಾಯಕರಲ್ಲಿ (senior leaders) ಯಾರಿಗೂ ತನ್ನ ವಿಷಯದಲ್ಲಿ ಅಸಮಾಧಾನವಿಲ್ಲ, ಎಲ್ಲರನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು, ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಿಸುವುದಾಗಿ ಹೇಳಿದರು. ಶುಕ್ರವಾರದಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ (BJP legislature party meet) ನಡೆಸುವುದು ನಿಗದಿಯಾಗಿದೆ ಎಂದು ಹೇಳಿದ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಮಾತಾಡುವ ಪ್ರಯ್ನತ್ನ ಮಾಡಿದ್ದು ಅವರು ಬ್ಯೂಸಿಯಾಗಿದ್ದ ಕಾರಣ ಸ್ವಲ್ಪ ಸಮಯದ ಬಳಿಕ ಅವರೇ ವಾಪಸ್ಸು ಕರೆಮಾಡಲಿದ್ದಾರೆ ಎಂದರು. ನವೆಂಬರ್ 17ರಂದು ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ವೀಕ್ಷಕರಾಗಿ ದೆಹಲಿಯಿಂದ ಯಾರು ಬರಲಿದ್ದಾರೆ ಅನೋದನ್ನು ನಡ್ಡಾ ಜೀ ಅವರಿಂದ ಖಾತರಿ ಪಡಿಸಿಕೊಳ್ಳಬೇಕಿದೆ ಎಂದು ವಿಜಯೇಂದ್ರ ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ