ಬೆಂಗಳೂರಲ್ಲಿ ಪುನಃ ಮಳೆ, ಹಲವೆಡೆ ಟ್ರಾಫಿಕ್ ಜಾಮ್, ಸಾಮಾನ್ಯ ಜನಜೀವನ ಅಸ್ತವ್ಯಸ್ತ

|

Updated on: Oct 15, 2024 | 12:24 PM

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಕಾರಣ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆ ಸುರಿಯಲಾರಂಭಿಸಿದೆ. ಹಾಗೆ ನೋಡಿದರೆ ಅಕ್ಟೋಬರ್ 14ರಂದು ಮಳೆಯಾಗುವುದು ನಿಂತು ಹೋಗಲಿದೆ ಎನ್ನಲಾಗಿತ್ತು, ಆದರೆ ಇಂದು ಮತ್ತೇ ಅದು ಸುರಿಯಲಾರಂಭಿಸಿದೆ, ಯಾವಾಗ ನಿಲ್ಲುತ್ತದೆಯೋ?

ಬೆಂಗಳೂರು: ನಗರದಲ್ಲಿ ಇಂದು ಬೆಳಗ್ಗೆಯಿಂದಲೇ ಒಂದೇಸಮ ಮಳೆ ಸುರಿಯಲಾರಂಭಿಸಿದ ಕಾರಣ ಸಾಮಾನ್ಯ ಜನಜೀವನ ಅಸ್ಯವ್ಯಸ್ತಗೊಂಡಿದೆ. ಬೆಂಗಳೂರಿನ ಪ್ರಮುಖ ಜಂಕ್ಷನ್​​​ಗಳಲ್ಲೊಂದಾದ ಮೇಖ್ರಿ ಸರ್ಕಲ್ ದೃಶ್ಯವನ್ನು ಇಲ್ಲಿ ನೋಡಬಹುದು. ಇದೊಂದೇ ಅಂತಲ್ಲ, ನಗರದ ಪ್ರಮುಖ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಇವತ್ತಿನ ಸಾಮಾನ್ಯ ದೃಶ್ಯವಾಗಿದೆ. ಶಾಲಾ-ಕಾಲೇಜುಗಳಿಗೆ ಹೋಗುವ ಮಕ್ಕಳು, ಮತ್ತು ಕಚೇರಿಗಳಿಗೆ ಕೆಲಸಕ್ಕೆ ಹೋಗುವವರು ತಮ್ಮ ಸ್ಥಳಗಳನ್ನು ಮುಟ್ಟಲು ಸಾಕಷ್ಟು ಕಷ್ಟಪಡಬೇಕಾಯಿತು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ನೆಲಮಂಗಲದಲ್ಲಿ ಬೆಳ್ಳಂಬೆಳಗ್ಗೆಯೇ ಭಾರಿ ಮಳೆ

Follow us on