AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Assembly Session: ಉತ್ತರ ಕರ್ನಾಟಕದಲ್ಲಿ ಕೇವಲ ಕೃಷಿ ಕ್ರಾಂತಿ ಆದರೆ ಸಾಲದು, ಔದ್ಯೋಗಿಕ ಕ್ರಾಂತಿಯೂ ಅಗಬೇಕು: ಲಕ್ಷ್ಮಣ ಸವದಿ

Karnataka Assembly Session: ಉತ್ತರ ಕರ್ನಾಟಕದಲ್ಲಿ ಕೇವಲ ಕೃಷಿ ಕ್ರಾಂತಿ ಆದರೆ ಸಾಲದು, ಔದ್ಯೋಗಿಕ ಕ್ರಾಂತಿಯೂ ಅಗಬೇಕು: ಲಕ್ಷ್ಮಣ ಸವದಿ

ಅರುಣ್​ ಕುಮಾರ್​ ಬೆಳ್ಳಿ
|

Updated on: Dec 18, 2024 | 3:52 PM

Share

ಕೇವಲ ಬೆಂಗಳೂರು ಬೆಳೆದರೆ ಅದು ರಾಜ್ಯದ ಬೆಳವಣಿಗೆ ಅನಿಸಿಕೊಳ್ಳಲಾರದು, ರಸ್ತೆಯಲ್ಲಿ ಓಡಾಡಲಾಗದಷ್ಟು ಬೆಂಗಳೂರು ಬೆಳೆದಿದೆ ಆದರೆ ಉತ್ತರ ಕರ್ನಾಟಕದಲ್ಲಿ ರೈತರ ಮಕ್ಕಳಿಗೆ ಹೆಣ್ಣು ಕೊಡದಂಥ ಸ್ಥಿತಿ ನಿರ್ಮಾಣವಾಗಿದೆ, ಜನ ತಮ್ಮ ಹೆಣ್ಣುಮಕ್ಕಳನ್ನು ಸರ್ಕಾರೀ ಕಚೇರಿಗಳಲ್ಲಿ ಚಪ್ರಾಸಿಗಳಾಗಿ ಕೆಲಸ ಮಾಡುವವರಿಗೆ ಕೊಡಲು ಸಿದ್ದರಿದ್ದಾರೆಯೇ ಹೊರತು ಬೇಸಾಯ ಮಾಡುವವರಿಗೆ ಕೊಟ್ಟು ಮದುವೆ ಮಾಡಲು ಒಪ್ಪಲಾರರು ಎಂದು ಸವದಿ ಹೇಳಿದರು.

ಬೆಳಗಾವಿ: ಉತ್ತರ ಕರ್ನಾಟಕ ಅಭಿವೃದ್ಧಿ ಹೊಂದಬೇಕಾದರೆ ಅಸಲಿಗೆ ಆಗಬೇಕಿರುವುದೇನು ಅಂತ ಅಥಣಿ ಶಾಸಕ ಲಕ್ಷ್ಮಣ ಸವದಿ ಇವತ್ತು ಸದನದಲ್ಲಿ ಸವಿಸ್ತಾರವಾಗಿ ಹೇಳಿದರು. ಉತ್ತರ ಕರ್ನಾಟಕ ಭಾಗದಲ್ಲಿ ಕೇವಲ ಕೃಷಿ ಕ್ರಾಂತಿಯಾದರೆ ಸಾಲದು, ಔದ್ಯೋಗಿಕ ಕ್ರಾಂತಿಯೂ ಆಗಬೇಕಿದೆ, ಈ ಭಾಗದವವರೇ ಅಗಿರುವ ಎಂಬಿ ಪಾಟೀಲ್ ಕೈಗಾರಿಕಾ ಸಚಿವರಾಗಿರುವುದು ಸುದೈವ, ಅವರು ಹೊಸ ನೀತಿಗಳ ಮೂಲಕ ಉತ್ತರ ಕರ್ನಾಟದಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಲು ಪ್ರಯತ್ನ ನಡೆಸಿರುವುದು ಶ್ಲಾಘನೀಯ, ಅವರಿಗೆ ದಕ್ಷಿಣ ಭಾಗದ ಸಚಿವರು ಸಹಕಾರ ನೀಡಬೇಕು ಮತ್ತು ಸರ್ಕಾರ ವಿಶೇಷ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಸವದಿ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  Karnataka Assembly Session: ಪರಿಸರ ಮಾಲಿನ್ಯ ಅಧಿಕಾರಿಗಳಿಗೆ ನನ್ನ ಸಕ್ಕರೆ ಕಾರ್ಖಾನೆ ಬಿಟ್ಟು ಬೇರೆ ಯೋಚನೆಯೇ ಇಲ್ಲ: ಬಸನಗೌಡ ಯತ್ನಾಳ್