ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸಾಗಹಾಕಿ ಇವತ್ತಿಗೆ ಮೂರನೇ ದಿನ. ಬಳ್ಳಾರಿ ಜೈಲು ಹೇಗೆ ಅಂತ ಈಗಾಗಲೇ ಅವರಿಗೆ ಮನವರಿಕೆಯಾಗಿರಬಹುದು. ಇವತ್ತು ಬೆಳಗ್ಗೆ ಉತ್ತರ ವಲಯ ಡಿಐಜಿ ಟಿಪಿ ಶೇಷ ಜೈಲಿಗೆ ಭೇಟಿ ನೀಡಿ ದರ್ಶನ್ ಗಾಗಿ ಜೈಲಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಅವರು ಜೈಲಿಗೆ ಬಂದಾಗ ಅಲ್ಲಿನ ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ದರ್ಶನ್ ತೂಗುದೀಪ: ಬಳ್ಳಾರಿ ಜೈಲಲ್ಲಿ ಹಸ್ತಲಾಘವಕ್ಕಾಗಿ ದರ್ಶನ್ ಕೈ ಚಾಚಿದಾಗ ಅಧಿಕಾರಿಯೊಬ್ಬರು ‘ನೋ’ ಅಂದರು!