ಬಳ್ಳಾರಿ ಜೈಲಲ್ಲಿ ದರ್ಶನ್​ಗೆ ಮೂರನೇ ದಿನ, ಪರಿಶೀಲನೆಗೆ ಆಗಮಿಸಿದ ಉತ್ತರ ವಲಯ ಡಿಐಜಿ ಟಿಪಿ ಶೇಷ

ಅರುಣ್​ ಕುಮಾರ್​ ಬೆಳ್ಳಿ

Updated on: Aug 31, 2024 | 1:55 PM

ಶುಕ್ರವಾರದಂದೇ ದರ್ಶನ್ ವಿಷಯದಲ್ಲಿ ಯಾವೆಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಡಿಐಜಿ ಟಿಪಿ ಶೇಷ ಜೈಲಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದರು ಮತ್ತು ಅವುಗಳ ಪಾಲನೆ ಬಗ್ಗೆ ಫಸ್ಟ್ ಹ್ಯಾಂಡ್ ಮಾಹಿತಿ ಸಂಗ್ರಹಿಸಲು ಇಂದು ಜೈಲಿಗೆ ಭೇಟಿ ನೀಡಿದ್ದರು.

ಬಳ್ಳಾರಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದರ್ಶನ್ ರನ್ನು ಬಳ್ಳಾರಿ ಸೆಂಟ್ರಲ್ ಜೈಲಿಗೆ ಸಾಗಹಾಕಿ ಇವತ್ತಿಗೆ ಮೂರನೇ ದಿನ. ಬಳ್ಳಾರಿ ಜೈಲು ಹೇಗೆ ಅಂತ ಈಗಾಗಲೇ ಅವರಿಗೆ ಮನವರಿಕೆಯಾಗಿರಬಹುದು. ಇವತ್ತು ಬೆಳಗ್ಗೆ ಉತ್ತರ ವಲಯ ಡಿಐಜಿ ಟಿಪಿ ಶೇಷ ಜೈಲಿಗೆ ಭೇಟಿ ನೀಡಿ ದರ್ಶನ್ ಗಾಗಿ ಜೈಲಧಿಕಾರಿಗಳು ತೆಗೆದುಕೊಂಡಿರುವ ಕ್ರಮಗಳನ್ನು ಪರಿಶೀಲಿಸಿದರು. ಅವರು ಜೈಲಿಗೆ ಬಂದಾಗ ಅಲ್ಲಿನ ಸಿಬ್ಬಂದಿ ಗೌರವ ವಂದನೆ ಸಲ್ಲಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ದರ್ಶನ್ ತೂಗುದೀಪ: ಬಳ್ಳಾರಿ ಜೈಲಲ್ಲಿ ಹಸ್ತಲಾಘವಕ್ಕಾಗಿ ದರ್ಶನ್ ಕೈ ಚಾಚಿದಾಗ ಅಧಿಕಾರಿಯೊಬ್ಬರು ‘ನೋ’ ಅಂದರು!

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.