Karnataka Assembly polls; ಕಾಂಗ್ರೆಸ್ ಗೆಲ್ಲೋದು 141 ಸ್ಥಾನ, ಮುಖ್ಯಮಂತ್ರಿಯ ಘೋಷಣೆ ಮೇ 15ರಂದು ಖರ್ಗೆ ಮಾಡಲಿದ್ದಾರೆ: ಡಿಕೆ ಶಿವಕುಮಾರ್
ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ಸಭೆಯಲ್ಲೇ 5 ಪ್ರಮುಖ ಆಶ್ವಾಸನೆಗಳನ್ನು ಅನುಷ್ಠಾನಗೊಳಿಸುವ ಆದೇಶ ಹೊರಡಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.
ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 141 ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ಬರುವ ವಿಶ್ವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತಾಡಿದ ಶಿವಕುಮಾರ್ ಮೇ 13 ರಂದು ಫಲಿತಾಂಶ (result) ಪ್ರಕಟವಾಗುತ್ತದೆ. ಮೇ 15ರಂದು ಕಾಂಗ್ರೆಸ್ ಸರ್ಕಾರದ ಮೊದಲ ಸಂಪುಟ ಸಭೆ ನಡೆಯುತ್ತದೆ ಮತ್ತು ಚುನಾವಣಾ ಪ್ರಚಾರದಲ್ಲಿ ನೀಡಿದ 5 ಪ್ರಮುಖ ಆಶ್ವಾಸನೆಗಳನ್ನು ಅನುಷ್ಠಾನಗೊಳಿಸುವ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು. ಸಂಪುಟ ಸಭೆ ಯಾರ ನೇತೃತ್ವದಲ್ಲಿ ನಡೆಯಲಿದೆ ಅಂತ ಪತ್ರಕರ್ತರೊಬ್ಬರು ಕೇಳಿದ ಟ್ರಿಕ್ಕಿ ಪ್ರಶ್ನೆಗೆ ಶಿವಕುಮಾರ್ ಅದರ ಬಗ್ಗೆ ಮೇ 15 ರಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಘೋಷಣೆ ಮಾಡಲಿದ್ದಾರೆ ಎಂದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us