ಜಿ20 ಶೃಂಗಸಭೆಗೆ ರಾಜ್ಯ ಸಭಾ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆಯವರನ್ನು ಆಹ್ವಾನಿಸದಿರುವುದು ತಪ್ಪು: ಸಿದ್ದರಾಮಯ್ಯ

ಅರುಣ್​ ಕುಮಾರ್​ ಬೆಳ್ಳಿ

Updated on: Sep 09, 2023 | 2:42 PM

ಇದೇ ವಿಚಾರವಾಗಿ ನಗರದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೇಳಿದಾಗ, ಅವರು ಕೇವಲ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಾತ್ರ ಅಲ್ಲ, ರಾಜ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿದ್ದಾರೆ, ಹಾಗಾಗಿ ಜಿ20 ಶೃಂಗಸಭೆಗೆ ಅವರನ್ನು ಆಹ್ವಾನಿಸದಿರುವುದು ತಮ್ಮ ಎಣಿಕೆಯಲ್ಲಿ ತಪ್ಪು ಎಂದು ಹೇಳಿದರು.

ಹುಬ್ಬಳ್ಳಿ: ದೆಹಲಿಯ ಪ್ರಗತಿ ಮೈದಾನದಲ್ಲಿ ಹಾಕಲಾಗಿರುವ ವೈಭವೋಪೇತ ಬಾರತ್ ಮಂಟಪಂ ನಲ್ಲಿ (Bharat Mandapam) ಜಿ20 ಶೃಂಗಸಭೆ ನಡೆಯುತ್ತಿದೆ. 20 ರಾಷ್ಟ್ರಗಳ ಗಣ್ಯಾತಿಗಣ್ಯರಲ್ಲದೆ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ವಿಶ್ವಸಂಸ್ಥೆ, ವಿಶ್ವ ಬ್ಯಾಂಕ್, ವಿಶ್ವ ವ್ಯಾಪಾರ ಕೇಂದ್ರ, ವಿಶ್ವ ಆರೋಗ್ಯ ಸಂಸ್ಥೆ ಮುಂತಾದ ಸಂಸ್ಥೆಗಳ ಪಧಾದಿಕಾರಿಗಳು ಶೃಂಗಸಭೆಯಲ್ಲಿ ಪಾಲ್ಗೊಂಡಿದ್ದಾರೆ. ಆದರೆ, ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧ್ಯಕ್ಷ ಮತ್ತು ರಾಜ್ಯ ಸಬೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಆಹ್ವಾನ ಸಿಕ್ಕಿಲ್ಲ. ಮಾಧ್ಯಮ ಪ್ರತಿನಿಧಿಗಳು ಇದೇ ವಿಚಾರವಾಗಿ ನಗರದಲ್ಲಿಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರನ್ನು ಕೇಳಿದಾಗ, ಅವರು ಕೇವಲ ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಮಾತ್ರ ಅಲ್ಲ, ರಾಜ್ಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿದ್ದಾರೆ, ಹಾಗಾಗಿ ಜಿ20 ಶೃಂಗಸಭೆಗೆ ಅವರನ್ನು ಆಹ್ವಾನಿಸದಿರುವುದು ತಮ್ಮ ಎಣಿಕೆಯಲ್ಲಿ ತಪ್ಪು ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.