ಕೇವಲ ಭಾರತೀಯ ಸಂಜಾತರು ಮಾತ್ರವಲ್ಲ, ರಷ್ಯನ್ನರಲ್ಲೂ ಪ್ರಧಾನಿ ಮೋದಿಯವರನ್ನು ಕಾಣಲು ರೋಮಾಂಚನ!

ಕೇವಲ ಭಾರತೀಯ ಸಂಜಾತರು ಮಾತ್ರವಲ್ಲ, ರಷ್ಯನ್ನರಲ್ಲೂ ಪ್ರಧಾನಿ ಮೋದಿಯವರನ್ನು ಕಾಣಲು ರೋಮಾಂಚನ!
|

Updated on:Jul 09, 2024 | 12:28 PM

ನೀಲಿ ಸೂಟ್ ಧರಿಸಿರುವ ಭಾರತೀಯ ಸಂಜಾತರೊಬ್ಬರು, 2014 ರಲ್ಲಿ ನರೇಂದ್ರ ಮೋದಿಯವರು ಭಾರತದ ಪ್ರಧಾನಿ ಮಂತ್ರಿಯಾದ ಬಳಿಕ ವಿಶ್ವದಾದ್ಯಂತ ಭಾರತೀಯರ ಗೌರವ ಹೆಚ್ಚಿದೆ, ಜನ ನಮ್ಮನ್ನು ನೋಡುವ ದೃಷ್ಟಿಕೋನ ಬದಲಾಗಿದೆ, ಅವರನ್ನು ಇಷ್ಟು ಹತ್ತಿರದಿಂದ ನೋಡುವ ಅವಕಾಶ ಸಿಕ್ಕಿರುವುದಕ್ಕೆ ಆಗುತ್ತಿರುವ ಸಂತೋಷವನ್ನು ಬಾಯಲ್ಲಿ ಹೇಳಲಾರೆ ಅನ್ನುತ್ತಾರೆ.

ಮಾಸ್ಕೋ: ಭಾರತದ ಪ್ರಧಾನ ಮಂತ್ರಿ ನರೇಂದ್ರ ಮೋದಿ ರಷ್ಯಾ ಪ್ರವಾಸದಲ್ಲಿದ್ದಾರೆ. ಅವರು ಯಾವುದೇ ದೇಶಕ್ಕೆ ಹೋದರೂ ಅಲ್ಲಿನ ಭಾರತೀಯ ಸಂಜಾತರು ಪಡುವ ಖುಷಿ, ಸಂಭ್ರಮ ಮತ್ತು ಸ್ವಾಗತಿಸುವ ರೀತಿ ಪದಗಳಲ್ಲಿ ವರ್ಣಿಸಲಾಗದು. ಮಾಸ್ಕೋದ ಒಂದು ಭವನದಲ್ಲಿ ಪ್ರಧಾನಿ ಮೋದಿ ಅವರು ಭಾರತೀಯರನ್ನು ಭೇಟಿಯಾಗಿ ಸಂವಾದ ಮಾತಾಡಲಿದ್ದಾರೆ..ರಷ್ಯನ್ ಮೂಲದ ಜನ ಸಹ ಇಲ್ಲಿ ಸೇರಿದ್ದಾರೆ. ಪ್ರಧಾನಿ ಮೋದಿ ಸ್ವಾಗತಕ್ಕೆ ನಡೆದಿರುವ ತಯಾರಿಯನ್ನು ಗಮನಿಸಿ. ಗುಜರಾತಿನ ಸಾಂಪ್ರದಾಯಿಕ ನೃತ್ಯವನ್ನು ಕೆಲ ರಷ್ಯನ್ ಕಲಾವಿದರು ಮಾಡುತ್ತಿದ್ದಾರೆ. ಅವರು ಹಿಂದಿಯಲ್ಲಿ ಮಾತಾಡುದು ಸೋಜಿಗ ಹುಟ್ಟಿಸುತ್ತದೆ, ನೃತ ಮಾಡುತ್ತಿರುವ ಒಬ್ಬ ಮಹಿಳೆ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಅತೀವ ಸಂತೋಷವೆನಿಸುತ್ತಿದೆ ಎನ್ನುತ್ತಾರೆ. ಭಾರತೀಯ ಸಂಜಾತರ ಜೊತೆ ಕುಳಿತಿರುವ ಒಬ್ಬ ರಷ್ಯನ್ ಯುವತಿ ಪ್ರಧಾನಿ ಮೋದಿಯರನ್ನು ಭೇಟಿಯಾಗುವ ಅವಕಾಶ ಸಿಗುತ್ತಿರುವುದು ನನ್ನ ಸೌಭಾಗ್ಯವೆಂದು ಹೇಳುತ್ತಾರೆ, ಭಾರತೀಯ ಮೂಲದ ಯುವತಿಯೊಬ್ಬರು, ಪ್ರಧಾನಿ ಮೋದಿಯವರನ್ನು ಭೇಟಿಯಾಗುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿ ಮತ್ತು ಅದು ನನ್ನಲ್ಲಿ ರೋಮಾಂಚನ ಹುಟ್ಟಿಸಿದೆ ಎನ್ನುತ್ತಾರೆ. ಮತ್ತೊಬ್ಬ ರಷ್ಯನ್ ಮಹಿಳೆ ಇದು ನನ್ನ ಬದುಕಿನ ಅತ್ಯಂತ ರೋಮಾಂಚಕ ಕ್ಷಣ ಎನ್ನುತ್ತಾರೆ. ಎಲ್ಲರಲ್ಲೂ ಸಂಭ್ರಮ ಸಡಗರ!.

 

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ‘ಸಮರದಿಂದ ಪರಿಹಾರ ಇಲ್ಲ’- ಉಕ್ರೇನ್ ಯುದ್ಧ ನಿಲ್ಲಿಸಲು ಪುಟಿನ್​ಗೆ ಮೋದಿ ಮನವಿ; ರಷ್ಯಾ ಸೇನೆಯಿಂದ ಭಾರತೀಯರ ಬಿಡುಗಡೆಗೆ ನಿರ್ಧಾರ

Published On - 12:27 pm, Tue, 9 July 24

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ