AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋಕಸಭಾ ಚುನಾವಣೆ ಕೇವಲ ಮಂಡ್ಯಕ್ಕೆ ಸೀಮಿತವಲ್ಲ, ವರಿಷ್ಠರು ಸೂಚಿಸಿದ ಕಡೆಯೆಲ್ಲ ಪ್ರಚಾರ ಮಾಡುತ್ತೇನೆ: ಸುಮಲತಾ ಅಂಬರೀಶ್

ಲೋಕಸಭಾ ಚುನಾವಣೆ ಕೇವಲ ಮಂಡ್ಯಕ್ಕೆ ಸೀಮಿತವಲ್ಲ, ವರಿಷ್ಠರು ಸೂಚಿಸಿದ ಕಡೆಯೆಲ್ಲ ಪ್ರಚಾರ ಮಾಡುತ್ತೇನೆ: ಸುಮಲತಾ ಅಂಬರೀಶ್

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on: Apr 05, 2024 | 1:12 PM

Share

ಲೋಕಸಭಾ ಚುವಾವಣೆ ಕೇವಲ ಮಂಡ್ಯ ಕ್ಷೇತ್ರದಲ್ಲಿ ಮಾತ್ರ ನಡೆಯುತ್ತಿಲ್ಲ ಎಂದು ನಗುತ್ತಾ ಹೇಳಿ, ಪಕ್ಷದ ವರಿಷ್ಠರು ಯಾವುದೇ ಕ್ಷೇತ್ರದಲ್ಲಿ ಪ್ರಚಾರ ಮಾಡುವಂತೆ ಹೇಳಿದರೂ ಅದನ್ನು ಮಾಡುತ್ತೇನೆ, ಬರೀ ಮಂಡ್ಯ ಮಾತ್ರವಲ್ಲ ಎಂದರು. ಇನ್ನು ಮುಂದೆ ತಾನು ಪಕ್ಷದ ಚೌಕಟ್ಟಿನೊಳಗೆ ಕೆಲಸ ಮಾಡಬೇಕಾಗುತ್ತದೆ ಎಂದು ಸುಮಲತಾ ಹೇಳಿದರು.

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್ ಡಿ ಕುಮಾರಸ್ವಾಮಿಯವರ (HD Kumaraswamy) ಪರ ಪ್ರಚಾರ ಮಾಡ್ತೀರಾ ಅಂತ ಕೇಳಿದಾಗ ಸುಮಲತಾ ಅಂಬರೀಶ್ (Sumalatha Ambareesh) ಯಾವುದನ್ನೂ ಸ್ಪಷ್ಟವಾಗಿ ಹೇಳಲಿಲ್ಲ. ಪಾರ್ಟಿ ಹೇಳಿದ್ದನ್ನು ಮಾಡುತ್ತೇನೆ ಅಂತ ಹೇಳಿ ವಿಷಯವನ್ನು ಬಿಜೆಪಿ ವರಿಷ್ಠರ (party high command) ಮೇಲೆ ಜಾರಿಸುತ್ತಾರೆ. ಇಂದು ಬಿಜೆಪಿಯನ್ನು ಸೇರುವ ಮುನ್ನ ತಮ್ಮ ಪತಿ ಅಂಬರೀಶ್ ಅವರ ಸ್ಮಾರಕಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಅದೇ ಸ್ಥಳದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು ಲೋಕಸಭಾ ಚುವಾವಣೆ ಕೇವಲ ಮಂಡ್ಯ ಕ್ಷೇತ್ರದಲ್ಲಿ ಮಾತ್ರ ನಡೆಯುತ್ತಿಲ್ಲ ಎಂದು ನಗುತ್ತಾ ಹೇಳಿ, ಪಕ್ಷದ ವರಿಷ್ಠರು ಯಾವುದೇ ಕ್ಷೇತ್ರದಲ್ಲಿ ಪ್ರಚಾರ ಮಾಡುವಂತೆ ಹೇಳಿದರೂ ಅದನ್ನು ಮಾಡುತ್ತೇನೆ, ಬರೀ ಮಂಡ್ಯ ಮಾತ್ರವಲ್ಲ ಎಂದರು. ಇನ್ನು ಮುಂದೆ ತಾನು ಪಕ್ಷದ ಚೌಕಟ್ಟಿನೊಳಗೆ ಕೆಲಸ ಮಾಡಬೇಕಾಗುತ್ತದೆ, ಅಲ್ಲಿ ಕಾರ್ಯಕರ್ತರು ಮತ್ತು ಮುಖಂಡರಿರುತ್ತಾರೆ, ಎಲ್ಲರೊಂದಿಗೆ ಜೊತೆಗೂಡಿ ಕೆಲಸ ಮಾಡುವುದಾಗಿ ಸುಮಲತಾ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:   ಲೋಕಸಭಾ ಚುನಾವಣೆ 2024: ಕುಮಾರಸ್ವಾಮಿ ಗೆದ್ದರೆ ಸಚಿವರಾಗುತ್ತಾರೆ, ಹೀಗಾಗಿ ಹೆಚ್​ಡಿಕೆಗೆ ಮತ ಹಾಕಿ: ಜೆಡಿಎಸ್​ ಮುಖಂಡರಿಂದ ಪ್ರಚಾರ

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.