ಕಾಂಗ್ರೆಸ್ನಲ್ಲಿ ಮಾತ್ರವಲ್ಲ ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ: ರಾಜ್ಯ ರಾಜಕಾರಣದಲ್ಲಿ ಸಂಚಲನ
ನವೆಂಬರ್ ತಿಂಗಳಿಗೆ ಕೌಂಡ್ಡೌನ್ ಶುರುವಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡುವರೆ ವರ್ಷ ಆಗುತ್ತಿದೆ. ಸಂಪುಟ ಪುನರ್ ರಚನೆ ಚರ್ಚೆ ಜೋರಾಗಿದ್ದು, ಈ ಸಂಬಂಧ ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಸಿಎಂ ಸಿದ್ದರಾಮಯ್ಯ ಸಚಿವರಿಗೆ ಹೇಳಿ ಆಗಿದೆ. ಇದರೊಂದಿಗೆ ನವೆಂಬರ್ ಕ್ರಾಂತಿಗೆ ಮುನ್ನುಡಿ ಬರೆದಂತಾಗಿದೆ. ಈ ಸಚಿವ ಸಂಪುಟ ಪುನರ್ ರಚನೆ ನಡುವೆಯೇ ನಾಯಕತ್ವ ಬದಲಾವಣೆ ಚರ್ಚೆ ಸಹ ಜೋರಾಗಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಇನ್ನೊಂದೆಡೆ ಬಿಜೆಪಿಯಲ್ಲೂ ಸಹ ನವೆಂಬರ್ ಕ್ರಾಂತಿಯಾಗಲಿದೆ ಎಂದು ಕೈ ಹಿರಿಯ ನಾಯಕ ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ತುಮಕೂರು, (ಅಕ್ಟೋಬರ್ 14): ನವೆಂಬರ್ ತಿಂಗಳಿಗೆ ಕೌಂಡ್ಡೌನ್ ಶುರುವಾಗಿದೆ. ಸಿದ್ದರಾಮಯ್ಯ ಎರಡನೇ ಬಾರಿ ಸಿಎಂ ಆಗಿ ಎರಡುವರೆ ವರ್ಷ ಆಗುತ್ತಿದೆ. ಸಂಪುಟ ಪುನರ್ ರಚನೆ ಚರ್ಚೆ ಜೋರಾಗಿದ್ದು, ಈ ಸಂಬಂಧ ಎಲ್ಲದಕ್ಕೂ ಸಿದ್ಧರಾಗಿರಿ ಎಂದು ಸಿಎಂ ಸಿದ್ದರಾಮಯ್ಯ ಸಚಿವರಿಗೆ ಹೇಳಿ ಆಗಿದೆ. ಇದರೊಂದಿಗೆ ನವೆಂಬರ್ ಕ್ರಾಂತಿಗೆ ಮುನ್ನುಡಿ ಬರೆದಂತಾಗಿದೆ. ಈ ಸಚಿವ ಸಂಪುಟ ಪುನರ್ ರಚನೆ ನಡುವೆಯೇ ನಾಯಕತ್ವ ಬದಲಾವಣೆ ಚರ್ಚೆ ಸಹ ಜೋರಾಗಿದೆ. ಹೀಗಾಗಿ ರಾಜ್ಯ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ಜೋರಾಗಿವೆ. ಇನ್ನೊಂದೆಡೆ ಬಿಜೆಪಿಯಲ್ಲೂ ಸಹ ನವೆಂಬರ್ ಕ್ರಾಂತಿಯಾಗಲಿದೆ ಎಂದು ಕೈ ಹಿರಿಯ ನಾಯಕ ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ನೀಡಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ.
ತುಮಕೂರಿನಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎನ್.ರಾಜಣ್ಣ , ನೀವು ಬರೀ ಕಾಂಗ್ರೆಸ್ನವರ ಬಗ್ಗೆ ಮಾತ್ರ ಮಾತಾಡ್ತೀರಾ? ಬಿಜೆಪಿಯಲ್ಲೂ ನವೆಂಬರ್ ಕ್ರಾಂತಿ ಆಗುತ್ತೆ. ವಿಜಯೇಂದ್ರರನ್ನ ತೆಗೆಯಬೇಕು ಅಂತಾ ಒಂದು ಗುಂಪಿದೆ. ಒಂದು ವೇಳೆ ವಿಜಯೇಂದ್ರ ತೆಗೆದ್ರೆ ಯಡಿಯೂರಪ್ಪ ಸುಮ್ಮನಿರ್ತಾರಾ? ಬಿಜೆಪಿಗೆ ಯಡಿಯೂರಪ್ಪ ಅನಿವಾರ್ಯ. ಬಿಎಸ್ವೈಗೆ ಮತ ವರ್ಗಾವಣೆ ಮಾಡುವ ಸಾಮರ್ಥ್ಯವಿದೆ. ಅಂತಹ ನಾಯಕರ ವಿರುದ್ಧ ತೀರ್ಮಾನ ತೆಗೆದುಕೊಳ್ಳುವಾಗ ಹೈಕಮಾಂಡ್ ಸಾಕಷ್ಟು ಯೋಚನೆ ಮಾಡುತ್ತೆ. ಸಿದ್ದರಾಮಯ್ಯ ಸಹ ಅಂತಹ ಸಾಮರ್ಥ್ಯ ಇರುವವರು ಎಂದರು.
