ಸರ್ಕಾರಕ್ಕೆ ಎರಡುವರೆ ವರ್ಷ ತುಂಬಿದ ದಿನವೇ ಕಾಂಗ್ರೆಸ್​​ನಲ್ಲಿ ಮಹತ್ವ ಬೆಳವಣಿಗೆ: ದೆಹಲಿಗೆ ಹಾರಿದ ಸಚಿವರು, ಶಾಸಕರು!

Updated on: Nov 20, 2025 | 5:26 PM

ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನವೆಂಬರ್ ಕ್ರಾಂತಿ ಶಾಂತಿಯಾಗುವ ಹೊತ್ತಲ್ಲೇ ಕಾಂಗ್ರೆಸ್​​ನಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳಗಣಿಗೆಗಳು ಗರಿಗೆದರಿವೆ. ಹೌದು..ಸಿದ್ದರಾಮಯ್ಯ ಸರ್ಕಾರಕ್ಕೆ ಇಂದಿಗೆ ಎರಡಯವರೆ ವರ್ಷ ತುಂಬಿದ ದಿನವೇ ಕೆಲ ಶಾಸಕರು, ಸಚಿವರು ದೆಹಲಿಗೆ ಹಾರಿದ್ದಾರೆ.

ಬೆಂಗಳೂರು, ನವೆಂಬರ್ 20): ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಇಂದಿಗೆ ಎರಡೂವರೆ ವರ್ಷ ಯಶಸ್ವಿಯಾಗಿ ಪೂರೈಸಿದೆ. ಇದರ ಬೆನ್ನಲ್ಲೇ ಇದೀಗ ಅಧಿಕಾರ ಹಂಚಿಕೆ ಚರ್ಚೆ ಜೋರಾಗಿದೆ. ನವೆಂಬರ್ ಕ್ರಾಂತಿ ಶಾಂತಿಯಾಗುವ ಹೊತ್ತಲ್ಲೇ ಕಾಂಗ್ರೆಸ್​​ನಲ್ಲಿ ಮತ್ತೊಂದು ಮಹತ್ವದ ರಾಜಕೀಯ ಬೆಳಗಣಿಗೆಗಳು ಗರಿಗೆದರಿವೆ. ಹೌದು..ಸಿದ್ದರಾಮಯ್ಯ ಸರ್ಕಾರಕ್ಕೆ ಇಂದಿಗೆ ಎರಡಯವರೆ ವರ್ಷ ತುಂಬಿದ ದಿನವೇ ಕೆಲ ಶಾಸಕರು, ಸಚಿವರು ದೆಹಲಿಗೆ ಹಾರಿದ್ದಾರೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ನಡುವೆ ಪವರ್ ಶೇರಿಂಗ್ ಮುಸುಕಿನ ಗುದ್ದಾಟ ನಡೆಯುತ್ತಿದ್ದು, ಇದರ ನಡುವೆಯೇ ಬಹುತೇಕ ಡಿಕೆ ಶಿವಕುಮಾರ್ ಬಣದ ಶಾಸಕರು, ಸಚಿವರು ಹೈಕಮಾಂಡ್ ಭೇಟಿಗೆ ದೆಹಲಿ ತೆರಳಿದ್ದು, ಭಾರೀ ಕುತೂಹಲಕ್ಕೆ ಕಾರಣವಾಗಿದೆ.

Follow Us
Ramesh B Jawalagera

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More