ಗಣೇಶನಿಗೆ 108 ಕೆಜಿ ತೂಕದ ಲಡ್ಡು ಸಮರ್ಪಿಸಿದ ಎನ್​ಟಿಐ ಸೆಕೆಂಡ್ ಫೇಸ್ ಬಡಾವಣೆಯ ನಿವಾಸಿಗಳು

Updated on: Aug 29, 2025 | 6:25 PM

ಗಣಪನ ವಿಸರ್ಜನೆ ನಡೆಯುವ ರವಿವಾರದಂದು ಇಲ್ಲಿ ಅನೇಕ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಹಾಗೂ ಅದೇ ದಿನ ಬಹುಮಾನ ವಿತರಣೆ ಕೂಡ ನಡೆಯಲಿದೆ. ಶನಿವಾರ ಕನ್ನಡ ಖ್ಯಾತ ಸ್ಟ್ಯಾಂಡ್ ಅಪ್ ಕಮೇಡಿಯನ್ ಸುಧಾ ಬರಗೂರು ಹಾಸ್ಯ ಸಂಜೆಯ ಮೂಲಕ ಎಲ್ಲರನ್ನು ರಂಜಿಸಲಿದ್ದಾರೆ.

ಬೆಂಗಳೂರು, ಆಗಸ್ಟ್ 29: ಭಾರೀ ಗಾತ್ರದ ಗಣೇಶನನ್ನು ನಾವು ನೋಡುತ್ತಿದ್ದೇವೆ, ಆದರೆ ಗಣಪನಿಗೆ ನೈವೇದ್ಯ ರೂಪದಲ್ಲಿ ಭಾರೀ ಗಾತ್ರದ ಲಡ್ಡು ಸಮರ್ಪಿಸುವುದನ್ನು ಮೊದಲು ನೋಡಿದ್ದೀರಾ? ಇಲ್ಲಿ ನೋಡಿ, ರಾಜೀವ್ ಗಾಂಧಿ ನಗರ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದವರು ತಮ್ಮ ಏರಿಯಾದಲ್ಲಿ ಪ್ರತಿಷ್ಠಾಪಿಸಿರುವ ವಿನಾಯಕನಿಗೆ 108 ಕೆಜಿ ತೂಕದ ಲಡ್ಡುವನ್ನು ಸಮರ್ಪಣೆ ಮಾಡಿದ್ದಾರೆ. ಅದನ್ನು ಹೊರಲು 6 ಜನ ಬೇಕಾಗಿತ್ತು ಮಾರಾಯ್ರೇ! ಅಂದಹಾಗೆ ಸಂಘದವರು ಕಳೆದ ಹತ್ತು ವರ್ಷಗಳಿಂದ ಇಲ್ಲಿ ಗಣೇಶನನ್ನು ಪ್ರತಿಷ್ಠಾಪಿಸುತ್ತಿದ್ದಾರೆ ಮತ್ತು ಪ್ರತಿಭಾರಿ ಭಿನ್ನತೆಯನ್ನು ಕಾಯ್ದುಕೊಳ್ಳುತ್ತಾರೆ. ಈ ಬಾರಿ ಏರಿಯಾದ ಗೃಹಿಣಿಯರೆಲ್ಲ ಡೊಳ್ಳು ಬಾರಿಸುತ್ತ ಕುಣಿಯುತ್ತ ಪಾರ್ವತೀಪುತ್ರನನ್ನು ಬರಮಾಡಿಕೊಂಡಿದ್ದಾರೆ. ಇಲ್ಲಿನ ನಿವಾಸಿಗಳು ಮೂರು ದಿನಗಳ ಕಾಲ ನಡೆಯುವ ಗಣೇಶೋತ್ಸವದ ಬಗ್ಗೆ ಉತ್ಸಾಹದಿಂದ ಮಾತಾಡಿದ್ದಾರೆ.

ಇದನ್ನೂ ಓದಿ:  ಸ್ವಿಟ್ಜರ್ಲೆಂಡ್‌‌ ಪ್ರಜೆಯಿಂದ ಗಣೇಶೋತ್ಸವ: ಮುಸ್ಲಿಂ ಮನೆಯಲ್ಲಿ ಕ್ರೈಸ್ತನಿಂದ ಪ್ರತಿಷ್ಠಾಪನೆಯಾದ ಗಣಪತಿ ಇಲ್ಲಿ ನೋಡಿ

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More