ಸಂಘಟನೆಗಳು ಬಂದ್ ಆಚರಿಸುವ ಬದಲು ಸರ್ಕಾರದ ಪ್ರಯತ್ನಗಳಿಗೆ ಸಹಕಾರ ನೀಡಲಿ: ಡಿಕೆ ಶಿವಕುಮಾರ್

ಅರುಣ್​ ಕುಮಾರ್​ ಬೆಳ್ಳಿ

Updated on: Sep 23, 2023 | 5:01 PM

ಸರ್ಕಾರ ನಡೆಸುತ್ತಿರುವ ಹೋರಾಟದ ಮೇಲೆ ವಿಶ್ವಾಸವಿರಲಿ ಎಂದು ಹೇಳಿದ ಶಿವಕುಮಾರ್ ಬಂದ್ ಆಚರಣೆ ಮಾಡೋದು ಬೇಡ ಎಂದು ಸಂಘಟನೆಗಳ ಮುಖಂಡರಿಗೆ ವಿನಂತಿ ಮಾಡಿಕೊಂಡರು. ಬಂದ್ ಮಾಡುವ ಬದಲು ಸಂಘಟನೆಗಳೆಲ್ಲ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳಿಗೆ ಸಹಕಾರ ನೀಡಲಿ ಎಂದು ಅವರು ಹೇಳಿದರು.

ಬೆಂಗಳೂರು: ಕಾವೇರಿ ನದಿ ನೀರಿನ ಹಂಚಿಕೆ ಉಂಟಾಗಿರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು (various oraganisations) ಮಂಗಳವಾರ ಬೆಂಗಳೂರು ಬಂದ್ (Bengaluru Bandh) ಅಚರಿಸಲು ಕರೆ ನೀಡಿವೆ. ವಿಷಯಕ್ಕೆ ಸಂಬಂಧಿಸಿದಂತೆ ಶನಿವಾರ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ (DK Shivakumar), ಅವರೆಲ್ಲ ಬೆಂಗಳೂರು ಬಂದ್ ಆಚರಿಸಿದರೆ ತಮ್ಮ ಹೃದಯಕ್ಕೆ ತಾವೇ ಘಾಸಿ ಮಾಡಿಕೊಂಡಂತೆ, ಬಂದ್ ಆಚರಣೆಯಿಂದ ಆಗುವ ಪ್ರಯೋಜನವಾದರೂ ಏನು ಎಂದು ಪ್ರಶ್ನಿಸಿದರು. ಮುಂದುವರಿದು ಮಾತಾಡಿದ ಅವರು, ಎಲ್ಲರ ಪರವಾಗೇ ತಮ್ಮ ಸರ್ಕಾರ ಹೋರಾಟ ನಡೆಸಿದೆ, ಸರ್ಕಾರ ನಡೆಸುತ್ತಿರುವ ಹೋರಾಟದ ಮೇಲೆ ವಿಶ್ವಾಸವಿರಲಿ ಎಂದು ಹೇಳಿ ಬಂದ್ ಆಚರಣೆ ಮಾಡೋದು ಬೇಡ ಎಂದು ಸಂಘಟನೆಗಳ ಮುಖಂಡರಿಗೆ ವಿನಂತಿ ಮಾಡಿಕೊಂಡರು. ಬಂದ್ ಮಾಡುವ ಬದಲು ಸಂಘಟನೆಗಳೆಲ್ಲ ಸರ್ಕಾರ ನಡೆಸುತ್ತಿರುವ ಪ್ರಯತ್ನಗಳಿಗೆ ಸಹಕಾರ ನೀಡಲಿ ಎಂದು ಅವರು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.