AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತಾಡಿದ ಬಿಎಸ್ ಯಡಿಯೂರಪ್ಪ, ವಯಸ್ಸು 80 ಆದರೂ ಚೈತನ್ಯ ಉಡುಗಿಲ್ಲ ಅಂತ ಸಾಬೀತು ಮಾಡಿದರು!

ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾತಾಡಿದ ಬಿಎಸ್ ಯಡಿಯೂರಪ್ಪ, ವಯಸ್ಸು 80 ಆದರೂ ಚೈತನ್ಯ ಉಡುಗಿಲ್ಲ ಅಂತ ಸಾಬೀತು ಮಾಡಿದರು!

ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ|

Updated on:Mar 01, 2023 | 6:25 PM

Share

ಇಂದಿನಿಂದ ಪ್ರಾರಂಭವಾಗಿರುವ ವಿಜಯ ಸಂಕಲ್ಪ ಯಾತ್ರೆ ರಾಜ್ಯದ ಎಲ್ಲ 224 ಕ್ಷೇತ್ರಗಳ ಮೂಲಕ ಯಾತ್ರೆ ಹಾದುಹೋಗಲಿದ್ದು ಸುಮಾರು 8,000 ಕಿಮೀ ಗಳನ್ನು ಈ ಅವಧಿಯಲ್ಲಿ ಕ್ರಮಿಸಲಾಗುವುದು ಎಂದು ಬಿಎಸ್​ವೈ ಹೇಳಿದರು.

ಚಾಮರಾಜನಗರ: ಜಿಲ್ಲೆಯ ಹನ್ನೂರಲ್ಲಿ ನಡೆದ ಬಿಜೆಪಿ ಸಂವಾದ ಕಾರ್ಯಕ್ರಮದಲ್ಲಿ ಮಾತಾಡಿದ ಹಿರಿಯ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪನವರು (BS Yediyurappa) ತಮಗೆ ವಯಸ್ಸು ಎಂಭತ್ತಾದರೂ ಶಕ್ತಿಯಿನ್ನೂ ಕುಂದಿಲ್ಲ ಅನ್ನೋದನ್ನು ಭಾಷಣದ ಆರಂಭದಲ್ಲೇ ಪ್ರದರ್ಶಿಸಿದರು. ಇಂದಿನಿಂದ ಪ್ರಾರಂಭವಾಗಿರುವ ವಿಜಯ ಸಂಕಲ್ಪ ಯಾತ್ರೆ (Vijaya Sankalp Yatre) 20 ನೇ ತಾರೀಖಿನರೆಗೆ ನಡೆಯಲಿದ್ದು ರಾಜ್ಯದ ಎಲ್ಲ 224 ಕ್ಷೇತ್ರಗಳ (constituencies) ಮೂಲಕ ಯಾತ್ರೆ ಹಾದುಹೋಗಲಿದ್ದು ಸುಮಾರು 8,000 ಕಿಮೀ ಗಳನ್ನು ಈ ಅವಧಿಯಲ್ಲಿ ಕ್ರಮಿಸಲಾಗುವುದು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ರಾಜ್ಯಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಶಾಸಕ ನಿರಂಜನ್ ಕುಮಾರ್ ಭಾಗಿಯಾಗಿದ್ದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Mar 01, 2023 06:25 PM
Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.